4:15 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಗಂಭೀರ ಗಾಯ

09/12/2023, 12:12

ನಂಜನಗೂಡು(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇಬೂರು ಬಳಿ ನಂಜನಗೂಡು ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ.


ನಂಜನಗೂಡಿನ ಸತ್ಯ ಫೈನಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸಿದ್ದಯ್ಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಕಣೆನೂರು ಗ್ರಾಮದ ಮಹೇಂದ್ರ ಎಂಬುವವರೇ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಾಳುಗಳಾಗಿರುವ ದುರ್ದೈವಿಗಳು.
ಆಟೋ ಚಾಲಕನಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಆಂಬುಲೆನ್ಸ್ ಮುಖಾಂತರ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ನಂಜನಗೂಡು ಕಡೆಯಿಂದ ಹುಲ್ಲಹಳ್ಳಿ ಕಡೆಗೆ ಬರುತ್ತಿದ್ದ ಆಟೋ ಮತ್ತು ಹುಲ್ಲಹಳ್ಳಿಯಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ತಲೆಗೆ ತೀವ್ರ ಪೆಟ್ಟು ಬಿದ್ದು ಆಟೋ ಮತ್ತು ಬೈಕ್ ಪೂರ್ಣ ಜಖಂಗೊಂಡಿವೆ.
ನಂಜನಗೂಡು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು