3:16 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಂಜನಗೂಡು: ಆಟೋರಿಕ್ಷಾ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಸವಾರರಿಬ್ಬರು ಗಂಭೀರ ಗಾಯ

09/12/2023, 12:12

ನಂಜನಗೂಡು(reporterkarnataka.com): ಆಟೋರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇಬೂರು ಬಳಿ ನಂಜನಗೂಡು ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದೆ.


ನಂಜನಗೂಡಿನ ಸತ್ಯ ಫೈನಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸಿದ್ದಯ್ಯನಹುಂಡಿ ಗ್ರಾಮದ ಸಿದ್ದರಾಜು ಮತ್ತು ಕಣೆನೂರು ಗ್ರಾಮದ ಮಹೇಂದ್ರ ಎಂಬುವವರೇ ತಲೆಗೆ ತೀವ್ರ ಪೆಟ್ಟು ಬಿದ್ದು ಗಾಯಾಳುಗಳಾಗಿರುವ ದುರ್ದೈವಿಗಳು.
ಆಟೋ ಚಾಲಕನಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು ಮೂವರು ಗಾಯಾಳುಗಳನ್ನು ಆಂಬುಲೆನ್ಸ್ ಮುಖಾಂತರ ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.
ನಂಜನಗೂಡು ಕಡೆಯಿಂದ ಹುಲ್ಲಹಳ್ಳಿ ಕಡೆಗೆ ಬರುತ್ತಿದ್ದ ಆಟೋ ಮತ್ತು ಹುಲ್ಲಹಳ್ಳಿಯಿಂದ ನಂಜನಗೂಡು ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ನಿಯಂತ್ರಣ ತಪ್ಪಿ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರ ತಲೆಗೆ ತೀವ್ರ ಪೆಟ್ಟು ಬಿದ್ದು ಆಟೋ ಮತ್ತು ಬೈಕ್ ಪೂರ್ಣ ಜಖಂಗೊಂಡಿವೆ.
ನಂಜನಗೂಡು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು