5:51 AM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ಡಿ.16ರಿಂದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 26ನೇ ವರ್ಷದ ಬ್ರಹ್ಮೋತ್ಸವ; 20ಕ್ಕೆ ಕಪಿಲಾ ನದಿಯಲ್ಲಿ ತೆಪ್ಪೋತ್ಸವ

15/12/2023, 20:10

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ದೇವಾಲಯದಲ್ಲಿ 26ನೇ ವರ್ಷದ ಬ್ರಹ್ಮೋತ್ಸವವನ್ನು ಡಿಸೆಂಬರ್ 16 ರಿಂದ 27ರವರೆಗೆ ವಿಜೃಂಭಣೆ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ ಎಂದು ದೇವಾಲಯದ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ತಿಳಿಸಿದರು.
ಇಂದು ತಾಲೂಕು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.
ಡಿಸೆಂಬರ್ 16ರ ಬೆಳಿಗ್ಗೆ ಧ್ವಜಾರೋಹಣ 17ರ ಸಂಜೆ ಪಡಿ ಪೂಜೆ 20ಕ್ಕೆಅನ್ನ ಸಂತರ್ಪಣೆ ಮತ್ತು ಅಯ್ಯಪ್ಪ ಸ್ವಾಮಿ ಉತ್ಸವ ಹಾಗೂ ಕಪಿಲಾ ನದಿಯಲ್ಲಿ ತೆಪ್ಪೋತ್ಸವ, 24ಕ್ಕೆ ಇರುಮುಡಿ , 25ಕ್ಕೆ ಬೃಹತ್ ಪಾದಯಾತ್ರೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ಹಾಗೂ ನುರಿತ ಕಲಾವಿದರುಗಳಿಂದ ನೃತ್ಯ, ಭಕ್ತಿ ಗೀತೆ ಮತ್ತು ನಾಟಕಗಳೊಂದಿಗೆ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುಲಿವೆ ಎಂದು ಬ್ರಹ್ಮೋತ್ಸವದ ಬಗ್ಗೆ ವಿವರಿಸಿದರು.
ಅಲ್ಲದೆ ಶ್ರೀ ಕ್ಷೇತ್ರ ಶಬರಿಮಲೆಯಲ್ಲಿ ಇತ್ತೀಚೆಗೆ ಭಕ್ತರ ಸಂಖ್ಯೆ ಹೆಚ್ಚಾಗಿ ನೂಕು ನುಗ್ಗಲು ಉಂಟಾಗಿ ವೃದ್ದರು ಮಕ್ಕಳಿಗೆ ತುಂಬಾ ತೊಂದರೆಯಾಗುತ್ತಿದೆ.
ಅದಕ್ಕಾಗಿ ಶ್ರೀ ಕ್ಷೇತ್ರ ಶಬರಿಮಲೆಯ ಮಾದರಿಯಲ್ಲೇ ಎಲ್ಲಾ ದೇವತಾ ಕಾರ್ಯಗಳು ನಂಜನಗೂಡಿನ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲೇ ನಡೆಯುತ್ತಿರುವುದರಿಂದ ಕರ್ನಾಟಕದ ಭಕ್ತರು ಇಲ್ಲೇ ಬಂದು ತಮ್ಮ ಸೇವೆ ಸಲ್ಲಿಸಬಹುದು ಎಂದು ಮನವಿ ಮಾಡಿಕೊಂಡು ಭಕ್ತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಪತ್ರಿಕಾಗೋಷ್ಠಿಯಲ್ಲಿ ನಾರಾಯಣಸ್ವಾಮಿ, ಮಂಜುನಾಥ್, ಗಿರೀಶ್, ಭಕ್ತವತ್ಸಲ, ವೆಂಕಟೇಶ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು