10:14 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀ ಅಯ್ಯಪ್ಪಸ್ವಾಮಿ ದೇವಾಲಯ: ಶ್ರದ್ಧಾಭಕ್ತಿಯಿಂದ ನಡೆದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆ

18/12/2024, 14:38

ಮೋಹನ್ ನಂಜನಗೂಡು ಮೈಸೂರು

info.reporterkarnataka@gmsil.com

ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಪವಿತ್ರ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ಹತ್ತು ದಿನಗಳ ಕಾಲ ನಡೆಯುತ್ತಿರುವ 27ನೇ ಬ್ರಹ್ಮೋತ್ಸವ ದ ಅಂಗವಾಗಿ ಎರಡನೇ ದಿನವಾದ ಮಂಗಳವಾರ ರಾತ್ರಿ ದೇವಾಲಯದ ಪವಿತ್ರ 18 ಮೆಟ್ಟಿಲುಗಳ ಪಡಿ ಪೂಜೆಯು ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಶ್ರೀ ಕ್ಷೇತ್ರ ಶಬರಿಮಲೆ ಮಾದರಿಯಲ್ಲಿಯೇ ಅಲ್ಲಿನ ಅರ್ಚಕರುಗಳಿಂದಲೇ ಪವಿತ್ರ ಪಡಿ ಪೂಜೆಯನ್ನು ನಡೆಸಲಾಯಿತು. ಪಡಿ ಪೂಜೆ ಅಂಗವಾಗಿ ಪವಿತ್ರ 18 ಮೆಟ್ಟಿಲುಗಳು ಸೇರಿದಂತೆ ದೇವಾಲಯದ ಒಳ ಹಾಗು ಹೊರ ಆವರಣಗಳನ್ನು ವಿಶೇಷವಾಗಿ ಬಣ್ಣ ಬಣ್ಣದ ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
18 ಮೆಟ್ಟಿಲುಗಳಿಗೂ 18 ಕಳಶಗಳನ್ನು ಪ್ರತಿಷ್ಠಾಪಿಸಿ ಅವುಗಳಿಗೆ ಗಂಗಾಜಲ ತುಂಬಿ ಕಳಶಗಳ ಪೂಜೆ ಮಾಡಲಾಯಿತು. ನಂತರ ಅದೇ ಗಂಗಾಜಲದಿಂದ 18 ಮೆಟ್ಟಿಲುಗಳನ್ನು ಶುದ್ದಿ ಮಾಡಿ ಮೆಟ್ಟಿಲುಗಳಿಗೂ ವಿಶೇಷ ಪೂಜೆ ಸಲ್ಲಿಸಲಾಯಿತು.
ಪಡಿ ಪೂಜೆ ಬಳಿಕ ಅಯ್ಯಪ್ಪ ಸ್ವಾಮಿ ಭಕ್ತರ ಹರ್ಷೋದ್ಗಾರದೊಂದಿಗೆ ಗುರುಸ್ವಾಮಿಗಳು ಮಹಿಳಾ ಭಕ್ತರು ಸೇರಿದಂತೆ ನೂರಾರು ಮಾಲಾದಾರಿ ಅಯ್ಯಪ್ಪ ಭಕ್ತರು ಮೆಟ್ಟಿಲುಗಳನ್ನು ಹತ್ತುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು.
ಪವಿತ್ರ 18 ಮೆಟ್ಟಿಲುಗಳನ್ನು ಹತ್ತಿ ಬಂದ ಭಕ್ತರು ಕ್ಷೇತ್ರಾಧಿಪತಿ ಶ್ರೀ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದು ಪುಳಕಿತರಾದರು. ನಂತರ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿತು. ಬಂದ ಎಲ್ಲಾ ಭಕ್ತರಿಗೆ ದೇವಾಲಯದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.


ಪೂಜೆ ಬಳಿಕ ಗುರುಸ್ವಾಮಿಗಳಾದ ಪಿ. ದೇವರಾಜಸ್ವಾಮಿ ಮಾತನಾಡಿ ಪಡಿ ಪೂಜೆ ಹಾಗೂ ಮುಂದೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ವಿವರಿಸಿದರು. ಇದೇ ಸಂದರ್ಭ ಮಂಡ್ಯದ ಮಹೇಶ್ ಎಂಬ ದಾನಿಗಳ ಸಹಕಾರದಿಂದ ದೇವಾಲಯದಲ್ಲಿ ಭಕ್ತರ ಅನುಕೂಲಕ್ಕಾಗಿ ರಾತ್ರಿ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಕಾರ್ಯಕ್ರಮದ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು