12:39 PM Friday6 - March 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ ಜಿಎಸ್​ಟಿ ತರ್ಕಬದ್ಧಗೊಳಿಸಿದ್ದರಿಂದ ರಾಜ್ಯಕ್ಕೆ ರಾಜಸ್ವ ಸಂಗ್ರಹಣೆ ಕಡಿಮೆ: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ… ರಾಜ್ಯ ಸರ್ಕಾರಿ ಉದ್ಯೋಗ ನೇಮಕಾತಿಗೆ 5 ವರ್ಷಗಳ ಸಡಿಲಿಕೆ : ಸಿಎಂ ಸಿದ್ದರಾಮಯ್ಯ… ರಾಜ್ಯ ಬಜೆಟ್ 2026-27: ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ, ನವ ಕರ್ನಾಟಕದ ನಿರ್ಮಾಣ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ…

ಇತ್ತೀಚಿನ ಸುದ್ದಿ

ನಂಜನಗೂಡು: ಬಹಿರಂಗ ಪ್ರಚಾರ ಕೊನೆಯ ದಿನ ಬಿಜೆಪಿಯಿಂದ ಅಬ್ಬರದ ಪ್ರಚಾರ

24/04/2024, 19:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಹಿರಂಗ ಪ್ರಚಾರದ ಕೊನೆಯ ದಿನದಂದು ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಪಕ್ಷದ ಕಾರ್ಯಕರ್ತ ಮುಖಂಡರು ಬಿರುಸಿನ ಮತ ಪ್ರಚಾರ ನಡೆಸಿದರು.
ನಂಜನಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಮ್ಮರಗಾಲ, ಹೆಡತಲೆ ,ಬದನವಾಳು, ದೇವರಸನ ಹಳ್ಳಿ ಸೇರಿದಂತೆ ವಿವಿಧೆಡೆ ಬಿಜೆಪಿ ಮುಖಂಡರು ಪಾದಯಾತ್ರೆ ಮಾಡುವ ಮೂಲಕ ಮತಯಾಚನೆ ನಡೆಸಿದರು.
ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಘಟಕದ ಕಾರ್ಯದರ್ಶಿ ಹೆಮ್ಮರಗಾಲ ಸೋಮಣ್ಣ ನೇತೃತ್ವದಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.


ಪಾದಯಾತ್ರೆಯಲ್ಲಿ ಪಿಎಂ ನರೇಂದ್ರ ಮೋದಿ ಹಾಗೂ ಪಕ್ಷದ ಮುಖಂಡರುಗಳಿಗೆ ಜಯಕಾರದ ಘೋಷಣೆಗಳನ್ನು ಕೂಗಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.
ನಂತರ ರಾಜ್ಯ ಬಿಜೆಪಿ ಮುಖಂಡ ಅಶೋಕ್ ಹಾಗೂ ಜಿಲ್ಲಾ ಒಬಿಸಿ ಮುಖಂಡ ಸೋಮಣ್ಣ ಮಾತನಾಡಿ ಈ ಕ್ಷೇತ್ರದ ಅಭಿವೃದ್ಧಿ ಹರಿಕಾರರಾದ ಮಾಜಿ ಶಾಸಕ ಹರ್ಷವರ್ಧನ್ ಅವರು ಈ ಗ್ರಾಮಕ್ಕೆ ಸುಮಾರು 13 ಕೋಟಿ ರೂಪಾಯಿಗಳ ಅನುದಾನ ನೀಡಿ ಗ್ರಾಮದ ಅಭಿವೃದ್ಧಿ ಪಡಿಸಿದ್ದರು. ಆದರೆ ರಾಜ್ಯ ಸರ್ಕಾರದ ಸುಳ್ಳು ಗ್ಯಾರಂಟಿ ಮತ್ತು ಪೊಳ್ಳು ಭರವಸೆಗಳು ಅವರನ್ನು ಸೋಲುವಂತೆ ಮಾಡಿತು ಎಂದು ವಿಷಾದ ವ್ಯಕ್ತಪಡಿಸಿದರು.
ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳು ತಂದಿದ್ದ ಹಲವಾರು ಜನಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಿಲ್ಲಿಸಿ, ಜನರಿಗೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ 60 ವರ್ಷಗಳಲ್ಲಿ ಮಾಡದ ಅಭಿವೃದ್ಧಿಯನ್ನು ಮೋದಿಯವರು 10 ವರ್ಷದಲ್ಲೇ ಮಾಡಿ ದೇಶದಲ್ಲಿ ಹಲವಾರು ಬದಲಾವಣೆ ತಂದಿದ್ದಾರೆ. ಅದಕ್ಕಾಗಿ ಮತ್ತೊಮ್ಮೆ ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಲು ನಮ್ಮ ಪಕ್ಷದ ಅಭ್ಯರ್ಥಿ ಬಾಲರಾಜ್ ಅವರನ್ನು ಗೆಲ್ಲಿಸಿ ಕೊಡುವಂತೆ ಕಾರ್ಯಕರ್ತ ಮುಖಂಡರಲ್ಲಿ ಮನವಿ ಮಾಡಿಕೊಂಡರು.
ಪ್ರಚಾರಕ್ಕೆ ಬಂದ ಎಲ್ಲ ಮುಖಂಡರುಗಳಿಗೆ ಗ್ರಾಮಸ್ಥರು ಶಾಲುಹೊದಿಸಿ ಮಾಲಾರ್ಪಣೆ ಮಾಡಿ ಗೌರವಿಸಿದರು.
ಈ ಸಂದರ್ಭ ಮಂಡಲ ಅಧ್ಯಕ್ಷರಾದ ಕೆಂಡಗಣ್ಣಪ್ಪ ಕಾರ್ಯದರ್ಶಿ ಪುಟ್ಟಸ್ವಾಮಿ ಮುಖಂಡರುಗಳಾದ ಬದನವಾಳು ಮಹೇಶ್, ಮಸಗೆ ರಾಜು, ಮಹಾದೇವಸ್ವಾಮಿ ಮುಳ್ಳೂರು ಶೇಖರ್, ಸುರೇಶ್, ಕಾಳಪ್ಪ ಸೇರಿದಂತೆ ಹಲವಾರು ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು