12:01 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್

22/11/2023, 10:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗ್ರಾಮದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 12ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿರುತ್ತಾರೆ.
ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳಿದ್ದ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿಯ ಕರ್ತವ್ಯದಲ್ಲಿದ್ದ ಪೇದೆ ಗಳಾದ ನಂಜೇಶ್ ಹಾಗೂ ಪ್ರಸನ್ನಕುಮಾರ್ ರವರದ್ದಾಗಿರುತ್ತದೆ.
ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ. ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಗ್ರಾಮಕ್ಕೆ ಬಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸುಟ್ಟು ಗಾಯಗೊಂಡ ಆತನನ್ನು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.
ಕರ್ತವ್ಯಲೋಪದ ಹಿನ್ನಲೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಅವರು ನೀಡಿದ ವರದಿ ಆಧಾರದ ಮೇಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು