6:07 AM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಳಿಗೆರೆ ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ; ಇಬ್ಬರು ಪೊಲೀಸ್ ಸಿಬ್ಬಂದಿಗಳ ಸಸ್ಪೆಂಡ್

22/11/2023, 10:53

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತುಪಡಿಸಿ ಆದೇಶ ಹೊರಡಿಸಿದ್ದಾರೆ.
ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್ ಹಾಗೂ ಪೇದೆ ಪ್ರಸನ್ನ ಕುಮಾರ್ ಅಮಾನತಾದ ಸಿಬ್ಬಂದಿಗಳು.
ಗ್ರಾಮದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ನವೆಂಬರ್ 12ರಂದು ಬಿಳಿಗೆರೆ ಠಾಣೆಯ ಪಿಎಸ್ಸೈ ರವರು ಇಬ್ಬರು ಆರೋಪಿಗಳನ್ನ ಠಾಣೆಗೆ ಕರೆತಂದಿರುತ್ತಾರೆ.
ಮತ್ತೊಬ್ಬ ಆರೋಪಿಯನ್ನ ವಶಕ್ಕೆ ಪಡೆಯಲು ಪಿಎಸ್ಸೈ ರವರು ತೆರಳಿದ್ದ ವೇಳೆ ಇಬ್ಬರು ಆರೋಪಿಗಳ ಜವಾಬ್ದಾರಿಯ ಕರ್ತವ್ಯದಲ್ಲಿದ್ದ ಪೇದೆ ಗಳಾದ ನಂಜೇಶ್ ಹಾಗೂ ಪ್ರಸನ್ನಕುಮಾರ್ ರವರದ್ದಾಗಿರುತ್ತದೆ.
ಇಬ್ಬರು ಆರೋಪಿಗಳ ಪೈಕಿ ನಗರ್ಲೆ ಗ್ರಾಮದ ಕಿರಣ್ ಕುಮಾರ್(22) ಠಾಣೆಯಿಂದ ತಪ್ಪಿಸಿಕೊಂಡು ಪರಾರಿಯಾಗಿರುತ್ತಾನೆ. ಆಲ್ಲದೆ ಪೊಲೀಸರ ವಿಚಾರಣೆಗೆ ಹೆದರಿ ಗ್ರಾಮಕ್ಕೆ ಬಂದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಸುಟ್ಟು ಗಾಯಗೊಂಡ ಆತನನ್ನು ಮೈಸೂರಿನ ಕೆ. ಆರ್. ಆಸ್ಪತ್ರೆಗೆ ದಾಖಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಕಿರಣ್ ಕುಮಾರ್ ನವೆಂಬರ್ 13 ರಂದು ಮೃತಪಟ್ಟಿದ್ದಾನೆ.
ಕರ್ತವ್ಯಲೋಪದ ಹಿನ್ನಲೆ ನಂಜನಗೂಡಿನ ಡಿವೈಎಸ್ಪಿ ಗೋವಿಂದರಾಜು ಅವರು ನೀಡಿದ ವರದಿ ಆಧಾರದ ಮೇಲೆ ಇಬ್ಬರು ಸಿಬ್ಬಂದಿಗಳನ್ನ ಇಲಾಖಾ ವಿಚಾರಣೆಗೆ ಆದೇಶಿಸಿ ಅಮಾನತ್ತಿನಲ್ಲಿಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು