4:57 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಸಿಲಿನ ಬೇಗೆ ತಾಳಲಾರದೆ ಮೈ ತಣಿಸಲು ಕಪಿಲಾ ನದಿಗಿಳಿದ 3 ಮಂದಿ ಕಾರ್ಮಿಕರು ನೀರುಪಾಲು

26/03/2024, 15:21

*ನಂಜನಗೂಡಿನ ಗೊದ್ದನಪುರ ಬಳಿ ಇರುವ ಕಪಿಲಾ ನದಿಯಲ್ಲಿ ನಡೆದಿರುವ ಅವಘಡ*

*ಮೂವರು ಕಾರ್ಮಿಕರು ನೀರುಪಲಾಗಿ ಜೀವ ಕಳೆದುಕೊಂಡರೂ ಸ್ಥಳಕ್ಕಾಗಮಿಸದ ಕಾರ್ಮಿಕ ಇಲಾಖೆಯ ಅಧಿಕಾರಿಗಳು*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬೇಸಿಗೆಯ ಬಿಸಿಲಿನ ತಾಪ ತಾಳಲಾರದೆ ತಾಪ ನೀಗಿಸಿಕೊಳ್ಳುವ ಸಲುವಾಗಿ ಕಪಿಲಾ ನದಿಯಲ್ಲಿ ಈಜಲು ತೆರಳಿದ ಮೂವರು ಯುವಕರು ಸುಳಿಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ
ನಂಜನಗೂಡು ತಾಲ್ಲೂಕಿನ ಗೊದ್ದನಪುರ ಗ್ರಾಮದ ಕಪಿಲಾ ನದಿಯ ಬಳಿ ನಡೆದಿದೆ.


ಬಿಹಾರ ಮೂಲದ ಮೃತ ಕಾರ್ಮಿಕರಾದ ಮಿಲನ್ (25) ವರ್ಷ ಮೋಹನ್ (19) ವರ್ಷ ಹಾಗೂ ತರುಣ್ (19) ವರ್ಷ ಎಂಬುವರು ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮುಗಿಸಿ ಬಿಸಿಲಿನ ಬೇಗೆ ತಾಳಲಾರದೆ ಸಮೀಪದ ಗೊದ್ದನಪುರ ಗ್ರಾಮದ ಕಪಿಲಾ ನದಿಗೆ ಈಜಲು ತೆರಳಿದ್ದಾರೆ.
ಈ ಸಂದರ್ಭ ಮೂವರು ಯುವಕರು ನದಿಯ ಸುಳಿಗೆ ಸಿಲುಕಿದ ಕಾರಣ ಸುಳಿಯಿಂದ ತಪ್ಪಿಸಿಕೊಳ್ಳಲಾಗದೆ ಮೂವರೂ ಜೀವಕಳೆದುಕೊಂಡಿದ್ದಾರೆ.
ವಿಷಯ ತಿಳಿದ ನಂಜನಗೂಡು ಗ್ರಾಮಾಂತರ ಪೊಲೀಸರು ಅಗ್ನಿಶಾಮಕ ಠಾಣೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿ ಶೋಧ ಕಾರ್ಯಕ್ಕೆ ಮುಂದಾಗಿದ್ದಾರೆ. ಶೋಧ ಕಾರ್ಯದಲ್ಲಿ ಮಿಲನ್ ಎಂಬು ಯುವಕನ ಮೃತ ದೇಹ ಪತ್ತೆಯಾಗಿದೆ. ಇನ್ನುಳಿದ ಇಬ್ಬರು ಯುವಕರ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ.
ನಾಲ್ಕೈದು ವರ್ಷಗಳಿಂದಲೂ ಕೂಡ ಗುತ್ತಿಗೆ ಆಧಾರದ ಮೇಲೆ ನೆಸ್ಲೆ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವಕರು.
ಇದೀಗ ನಂಜನಗೂಡು ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು.
ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಪಿಲಾ ನದಿಯಲ್ಲಿ ಶವಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಮತ್ತು ನೆಸ್ಲೆ ಕಾರ್ಖಾನೆಯ ಯಾವುದೇ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿರದ ಕಾರಣ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು