4:14 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು