6:32 PM Thursday9 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು