7:18 PM Thursday3 - July 2025
ಬ್ರೇಕಿಂಗ್ ನ್ಯೂಸ್
ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು