1:09 AM Saturday15 - November 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ ಬಿಹಾರ ಚುನಾವಣೆ ಫಲಿತಾಂಶದಿಂದ ಪ್ರಧಾನಿ ಮೋದಿಯವರ ಜನಪ್ರೀಯತೆ ಮತ್ತೆ ದೃಢಪಟ್ಟಿದೆ: ಮಾಜಿ ಸಿಎಂ… ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು