1:50 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ಅಭ್ಯರ್ಥಿಗೆ ಕೈಕೊಟ್ಟು ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ; 4 ಮಂದಿ ಬಿಜೆಪಿ ಸದಸ್ಯರಿಗೆ ವಿಪ್ ಜಾರಿ

01/09/2024, 20:04

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಸೆಪ್ಟೆಂಬರ್ 3ರಂದು ನಡೆಯಲಿರುವ ನಂಜನಗೂಡು ನಗರಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಬಿಜೆಪಿ ಪಕ್ಷದಿಂದ ಆಯ್ಕೆಯಾದ 4 ಮಂದಿ ಸದಸ್ಯರು ಬಿಜೆಪಿಗೆ ಕೈ ಕೊಟ್ಟು ಕಾಂಗ್ರೆಸ್ ನವರ ಜೊತೆ ಪ್ರವಾಸ ಕೈಗೊಂಡಿರುವ ಪ್ರಯುಕ್ತ ಇಂದು ನಂಜನಗೂಡು ಬಿಜೆಪಿ ವತಿಯಿಂದ ಆ ನಾಲ್ವರು ಸದಸ್ಯರ ಮನೆಗಳಿಗೆ ವಿಪ್ ಪ್ರತಿ ಅಂಟಿಸುವ ಮೂಲಕ ಎಚ್ಚರಿಕೆ ನೀಡಲಾಗಿದೆ.
ಬಿಜೆಪಿ ಪಕ್ಷದಿಂದ 15 ಮಂದಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದು ಅದರಲ್ಲಿ ಗಿರೀಶ್, ಗಾಯತ್ರಿ ಮುರುಗೇಶ್, ವಿಜಯಲಕ್ಷ್ಮಿ ಕುಮಾರ್ ಹಾಗೂ ಮೀನಾಕ್ಷಿ ನಾಗರಾಜ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿ ದೇವು ಅವರನ್ನು ಬೆಂಬಲಿಸದೆ ಕಾಂಗ್ರೆಸ್ ಅಭ್ಯರ್ಥಿ ಪರ ಕೈಜೋಡಿಸಿ ಈಗಾಗಲೇ ಈ ನಾಲ್ಕು ಮಂದಿ ಸದಸ್ಯರು ಕಾಂಗ್ರೆಸ್ ನವರ ಜೊತೆ ಪ್ರವಾಸದಲ್ಲಿ ಇರುವುದಾಗಿ ತಿಳಿದು ಬಂದಿದೆ.ಈ ಹಿನ್ನಲೆ ಇಂದು ಬಿಜೆಪಿ ಜಿಲ್ಲಾಧ್ಯಕ್ಷ ಮಹದೇವಸ್ವಾಮಿ ಅವರ ಆದೇಶದ ಮೇರೆಗೆ ನಂಜನಗೂಡು ನಗರ ಬಿಜೆಪಿ ಘಟಕದ ಅಧ್ಯಕ್ಷ ಸಿದ್ದರಾಜು ನೇತೃತ್ವದಲ್ಲಿ ಸ್ಥಳೀಯ ಮುಖಂಡರ ಜೊತೆಗೂಡಿ ನಾಲ್ಕೂ ಮಂದಿ ಸದಸ್ಯರ ಮನೆಗಳಿಗೆ ತೆರಳಿ ಮನೆಯಲ್ಲಿ ಯಾರೂ ಇಲ್ಲದ ಕಾರಣ ಅವರವರ ಮನೆ ಬಾಗಿಲುಗಳಿಗೆ ವಿಪ್ ಪ್ರತಿಯನ್ನು ಅಂಟಿಸಲಾಯಿತು.
ಈ ವೇಳೆ ಮನೆಯಲ್ಲಿ ಸದಸ್ಯರಾಗಲಿ ಅಥವಾ ಅವರ ಕುಟುಂಬದ ಸದಸ್ಯರಾಗಲಿ ಯಾರು ಇರಲಿಲ್ಲ. ಬಳಿಕ ಬಿಜೆಪಿ ನಗರ ಘಟಕದ ಅಧ್ಯಕ್ಷ ಸಿದ್ದರಾಜು ಹಾಗೂ ಮಾಜಿ ಅಧ್ಯಕ್ಷ ಬಾಲಚಂದ್ರು ಮಾತನಾಡಿ ಘಟನೆಯ ಬಗ್ಗೆ ವಿವರಿಸಿದರು.


ಈ ಸಂದರ್ಭ ಬಿಜೆಪಿ ಮುಖಂಡರುಗಳಾದ ಕೃಷ್ಣಪ್ಪ ಗೌಡ, ಡಾ. ಚಿದಾನಂದ, ಮಧುರಾಜ್, ಗುರುಸ್ವಾಮಿ, ಧನರಾಜ್ ಭೂಲಾ, ಗಾಯತ್ರಿ, ಕೃಷ್ಣರಾಜ್, ವಿಷ್ಣು, ಮಹದೇವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು