9:45 PM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ

31/05/2024, 23:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು.


ನಂಜನಗೂಡು ಪಟ್ಟಣದ ಜೆಎಸ್ಎಸ್ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಕಾರ್ಮೆಲ್, ಸಿಟಿಜನ್ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಬಳಿಕ ಅವರು ಮಾತನಾಡಿ, ನಮ್ಮ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ. ಹಾಗಾಗಿ ಶಿಕ್ಷಕರೆಲ್ಲರೂ ಈ ಬಾರಿ ಹೊಸಬರನ್ನು ಆಯ್ಕೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ನಾನು ಶಾಸಕನಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ಅನುದಾನ ತಂದು ಅಭಿವೃದ್ಧಿ ಮಾಡಿರುವುದಲ್ಲದೆ ತಮ್ಮಗಳ ಅನುಕೂಲಕ್ಕಾಗಿ ಗುರುಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಹಾಗೂ 25 ಲಕ್ಷ ಅನುದಾನ ಮಂಜೂರು ಮಾಡಿದ್ದೇನೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಜ್ಞಾವಂತರಾದ ತಾವು ಈ ಬಾರಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯ ಮಹದೇವ ಪ್ರಸಾದ್, ಮುಖಂಡರುಗಳಾದ ಶಿವಣ್ಣ, ಪುಟ್ಟಸ್ವಾಮಿ,ಸಿದ್ದರಾಜು, ಶಂಕ್ರಪ್ಪ, ಬಾಲಚಂದ್ರು, ಪ್ರೇಮ ಶಂಭಯ್ಯ, ಮಹೇಶ್, ಪರಶಿವಮೂರ್ತಿ, ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು