7:59 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿವೇಕಾನಂದ ಪರ ಮಾಜಿ ಶಾಸಕ ಹರ್ಷವರ್ಧನ್ ಪ್ರಚಾರ

31/05/2024, 23:13

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಪದವೀಧರ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿವೇಕಾನಂದ ಅವರ ಪರ ಮಾಜಿ ಶಾಸಕ ಹರ್ಷವರ್ಧನ್ ಅವರು ಇಂದು ನಂಜನಗೂಡಿನಲ್ಲಿ ಬಿರುಸಿನ ಮತ ಪ್ರಚಾರ ನಡೆಸಿದರು.


ನಂಜನಗೂಡು ಪಟ್ಟಣದ ಜೆಎಸ್ಎಸ್ ಕಾಲೇಜು, ಸರ್ಕಾರಿ ಪದವಿ ಕಾಲೇಜು, ಕಾರ್ಮೆಲ್, ಸಿಟಿಜನ್ ಶಿಕ್ಷಣ ಸಂಸ್ಥೆಗಳಿಗೆ ತೆರಳಿ ಶಿಕ್ಷಕರುಗಳನ್ನು ಭೇಟಿ ಮಾಡಿ ಮತಯಾಚನೆ ಮಾಡಿದರು.
ಬಳಿಕ ಅವರು ಮಾತನಾಡಿ, ನಮ್ಮ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ ಅವರನ್ನು ಕಣಕ್ಕಿಳಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ನಾಲ್ಕು ಬಾರಿ ಪ್ರತಿನಿಧಿಸಿದ್ದಾರೆ. ಹಾಗಾಗಿ ಶಿಕ್ಷಕರೆಲ್ಲರೂ ಈ ಬಾರಿ ಹೊಸಬರನ್ನು ಆಯ್ಕೆ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ. ನಾನು ಶಾಸಕನಾಗಿ ಶಿಕ್ಷಣ ಕ್ಷೇತ್ರಕ್ಕೆ ಹಾಗೂ ಶಾಲಾ ಕಾಲೇಜುಗಳಿಗೆ ಅನುದಾನ ತಂದು ಅಭಿವೃದ್ಧಿ ಮಾಡಿರುವುದಲ್ಲದೆ ತಮ್ಮಗಳ ಅನುಕೂಲಕ್ಕಾಗಿ ಗುರುಭವನ ನಿರ್ಮಾಣಕ್ಕೆ 20 ಗುಂಟೆ ಜಾಗ ಹಾಗೂ 25 ಲಕ್ಷ ಅನುದಾನ ಮಂಜೂರು ಮಾಡಿದ್ದೇನೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಪ್ರಜ್ಞಾವಂತರಾದ ತಾವು ಈ ಬಾರಿ ಮೈತ್ರಿ ಅಭ್ಯರ್ಥಿ ವಿವೇಕಾನಂದ ಅವರಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಬಿಜೆಪಿ ಮಂಡಲ ಅಧ್ಯಕ್ಷ ಕೆಂಡಗಣ್ಣಪ್ಪ, ನಗರ ಘಟಕದ ಅಧ್ಯಕ್ಷ ಸಿದ್ದರಾಜು, ನಗರಸಭಾ ಸದಸ್ಯ ಮಹದೇವ ಪ್ರಸಾದ್, ಮುಖಂಡರುಗಳಾದ ಶಿವಣ್ಣ, ಪುಟ್ಟಸ್ವಾಮಿ,ಸಿದ್ದರಾಜು, ಶಂಕ್ರಪ್ಪ, ಬಾಲಚಂದ್ರು, ಪ್ರೇಮ ಶಂಭಯ್ಯ, ಮಹೇಶ್, ಪರಶಿವಮೂರ್ತಿ, ಕುಮಾರ್, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು