11:17 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು