11:47 PM Saturday20 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು