2:31 PM Sunday13 - July 2025
ಬ್ರೇಕಿಂಗ್ ನ್ಯೂಸ್
Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು