5:26 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು