3:58 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ನಂಜನಗೂಡು: ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

05/11/2024, 19:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹುಟ್ಟು ಹಬ್ಬದ ಆಚರಣೆ ಅಂಗವಾಗಿ ನಂಜನಗೂಡಿನಲ್ಲಿ ಪಕ್ಷದ ಮುಖಂಡರು ಹಾಗೂ ಅವರ ಅಭಿಮಾನಿಗಳು ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.


ಅದರಂತೆ ನಂಜನಗೂಡಿನಲ್ಲಿ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ ನೇತೃತ್ವದಲ್ಲಿ ನಂಜನಗೂಡಿನ ಬುದ್ದಿಮಾಂದ್ಯ ಆಸ್ಪತ್ರೆಯಲ್ಲಿ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು. ನಂಜನಗೂಡು ಗುಂಡ್ಲುಪೇಟೆ ರಾಜ್ಯ ಹೆದ್ದಾರಿಯ ಸಿಂಧುವಳ್ಳಿ ಬಳಿ ಇರುವ ಕರುಣಾಲಯ ಆಸ್ಪತ್ರೆಯ ನೂರಾರು ಬುದ್ಧಿಮಾಂದ್ಯರು ಹಾಗೂ ರೋಗಿಗಳಿಗೆ ವಿಜೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಒಂದು ಹೊತ್ತಿನ ಊಟದ ವ್ಯವಸ್ಥೆ ಕಲ್ಪಿಸಿ ಅವರಿಗೆ ಬಡಿಸಲಾಯಿತು.
ಬುದ್ದಿಮಾಂದ್ಯರು ವಿಜೇಂದ್ರ ಅವರಿಗೆ ಶುಭಾಶಯ ಕೋರಿ ಸಂತಸದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ಬಳಿಕ ರಾಜ್ಯ ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಮಹದೇವಯ್ಯ ಮಾತನಾಡಿ ಇಂದು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಡೀ ರಾಜ್ಯಾದ್ಯಂತ ಹಲವಾರು ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಅದರಂತೆ ನಂಜನಗೂಡಿನಲ್ಲಿ ನಮ್ಮ ಪಕ್ಷ ಹಾಗೂ ಮುಖಂಡರ ಜೊತೆಗೂಡಿ ಇಲ್ಲಿನ ಬುದ್ಧಿಮಾಂದ್ಯ ಆಸ್ಪತ್ರೆಯ ರೋಗಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗಿದೆ ಹಾಗಾಗಿ ವಿಜಯೇಂದ್ರ ಅವರಿಗೆ ದೇವರು ಆಯುರಾರೋಗ್ಯ ಹಾಗೂ ಹೆಚ್ಚಿನ ಅಧಿಕಾರ ನೀಡಲಿ ಎಂದು ಶುಭ ಹಾರೈಸಿದರು.
ರಾಜ್ಯ ಖಾದಿ ಗ್ರಾಮೋದ್ಯೋಗ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಕೃಷ್ಣಪ್ಪ ಗೌಡ,ಬಿಜೆಪಿ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷೆ ಮಂಗಳ ಸೋಮಶೇಖರ್, ಮುಖಂಡರುಗಳಾದ ಕೆಂಪಣ್ಣ, ಮಹದೇವಪ್ಪ, ಕುಂಬರಹಳ್ಳಿ ಸುಬ್ಬಣ್ಣ, ಬಸವಣ್ಣ, ಮಹೇಶ್ , ಮೋಹನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು