4:15 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಸುತ್ತೂರು ಶ್ರೀ ಚಾಲನೆ

08/06/2024, 20:18

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಗರದ ಜೆಎಸ್ಎಸ್ ಮಂಗಳ ಮಂಟಪದಲ್ಲಿ ರೋಟರಿ ಕ್ಲಬ್, ಇನ್ನರ್ ವೀಲ್ಸ್ ಹಾಗೂ ಔಷಧಿ ಇತರಕರ ಸಂಘ ಮತ್ತು ಜೆಎಸ್ಎಸ್ ಆಸ್ಪತ್ರೆ ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಮುಖ್ಯ. ಆರೋಗ್ಯ ಚೆನ್ನಾಗಿದ್ದರೆ ಮನುಷ್ಯ ಏನಾದರು ಸಾಧಿಸುತ್ತಾನೆ.
ನಿಯಮಿತ ಆಹಾರದ ಸೇವನೆ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಅನುವಂಶಿಯಿಂದ ಬರುವ ಕಾಯಿಲೆಗಳನ್ನು ತಾವೇ ಊಟೋಪಚಾರಗಳಿಂದ ಸರಿಪಡಿಸಿಕೊಳ್ಳಬೇಕು.
ಆರೋಗ್ಯ ತಪಾಸಣೆ ಯನ್ನು ವರ್ಷಕ್ಕೊಮ್ಮೆಯಾದರು ಮಾಡಿಸಿಕೊಳ್ಳಬೇಕು.


ಕಾಲ ಕಾಲಕ್ಕೆ ತಪಾಸಣೆ ಮಾಡಿಕೊಂಡು ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪದ್ಮನಾಥ್ ರಾವ್ ಮಾತನಾಡಿ ಬಡವರು ಹಾಗೂ ಅಶಕ್ತರ ಅನುಕೂಲಕ್ಕಾಗಿ ನಮ್ಮ ರೋಟರಿ ಸಂಸ್ಥೆ ಹಾಗೂ ಜೆ ಎಸ್ ಎಸ್ ಆಸ್ಪತ್ರೆ ವತಿಯಿಂದ ಪ್ರತಿ ವರ್ಷ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು.
ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಮಂದಿ ಪಾಲ್ಗೊಂಡು ವಿವಿಧ ಕಾಯಿಲೆಗಳಿಗೆ ತಪಾಸಣೆ ಮಾಡಿಸಿ ಕೊಂಡು ವೈದ್ಯರದಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಂಡರು.
ಇನ್ನು ನುರಿತ ವೈದ್ಯರುಗಳಿಂದ ವೈದ್ಯಕೀಯ ತಪಾಸಣೆ ಮತ್ತು ಸಾಮಾನ್ಯ ಕಾಯಿಲೆಗಳಿಗೆ ಸಲಹೆ, ಬಿಪಿ, ಶುಗರ್, ಸ್ತ್ರೀ ರೋಗ ತಪಾಸಣೆ, ಮಕ್ಕಳ ರೋಗ, ಹೃದಯ ಸಂಬಂಧಿ ಸಮಸ್ಯೆಗಳು ಕಣ್ಣು, ಕಿವಿ, ಮೂಗು ಮತ್ತು ಗಂಟಲು ತೊಂದರೆಗಳು ಕೀಲು ಮತ್ತು ಮೂಳೆ ಚರ್ಮದ ಸಮಸ್ಯೆ, ಜಠರ ರೋಗ, ಮೂತ್ರ ರೋಗ ತಪಾಸಣೆ ಸೇರಿದಂತೆ ಹಲವು ಕಾಯಿಲೆಗಳಿಗೆ ತಪಾಸಣೆ ನಡೆಸಲಾಯಿತು.
ನಂಜನಗೂಡು ತಾಲೂಕು ಔಷಧಿ ವಿತರಕರ ಸಂಘದ ವತಿಯಿಂದ ಶಿಬಿರ ದಲ್ಲಿ ಪಾಲ್ಗೊಂಡ ಎಲ್ಲಾ ರೋಗಿಗಳಿಗೂ ಉಚಿತ ಔಷಧಿ ವಿತರಣೆ ಮಾಡಲಾಯಿತು.
ಇದೇ ಸಂದರ್ಭ ಶ್ರೀಗಳು ಸೇರಿದಂತೆ ಶಿಬಿರಕ್ಕೆ ಸಹಾಯ ಮಾಡಿದ ಸಹಾಯಾರ್ತಿಗಳು ಹಾಗೂ ರೋಟರಿ ಸಂಘದ ಪದಾಧಿಕಾರಿಗಳನ್ನು ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು. ಚುಂಚನಹಳ್ಳಿ ಮಠದ ಶ್ರೀ ಚನ್ನಬಸವಸ್ವಾಮೀಜಿ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್, ರೋಟರಿ ಸಂಸ್ಥೆಯ ಅಧ್ಯಕ್ಷ, ರಮೇಶ್, ಜೆಎಸ್ಎಸ್ ಆಸ್ಪತ್ರೆಯ ಉಪ ಅಧೀಕ್ಷಕರಾದ ಡಾ. ನವೀನ್, ನಿರಂಜನ್ , ಗುತ್ತಿಗೆದಾರ ಪದ್ಮನಾಭರಾವ್, ರೋಟರಿ ಕಾರ್ಯದರ್ಶಿ ಪ್ರಕಾಶ್ ಚಂದ್ ಜೈನ್, ಸಹಾಯ ಗೌರ್ನರ್ ಕೆ ಜಿ ರಾಮಚಂದ್ರ, ಡಾ.ಶ್ರೀಕಾಂತ್, ಔಷದಿ ವಿತರಕರ ಸಂಘದ ಅಧ್ಯಕ್ಷ ಸುರೇಂದ್ರ ಆಸ್ಪತ್ರೆ ಎಚ್ಆರ್ ಮಲ್ಲಿಕಾರ್ಜುನ, ಇನ್ನರ್ ವೀಲ್ ಅಧ್ಯಕ್ಷೆ ಚೇತನ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು