3:54 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಂಜನಗೂಡು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಕೀಲರ ಪ್ರತಿಭಟನೆ

21/12/2024, 17:36

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ವಕೀಲರು ಪ್ರತಿಭಟನೆ ನಡೆಸಿದ್ದಾರೆ.


ನ್ಯಾಯಾಲಯದಿಂದ ಮೆರವಣಿಗೆ ಬಂದು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ತಡೆ ನಡೆಸಿ ಅಮಿತ್ ಶಾ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ವಕೀಲರು ಆಕ್ರೋಶ ವ್ಯಕ್ತಪಡಿಸಿದರು.
ವಕೀಲರ ಸಂಘದ ಅಧ್ಯಕ್ಷ ಅನಿಯಂಬಳ್ಳಿ ಮಹದೇವಸ್ವಾಮಿ ಮಾತನಾಡಿ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿ ಹಾಗೂ ಹಗುರವಾಗಿ ಮಾತನಾಡಿರುವುದನ್ನು ನಮ್ಮ ತಾಲೂಕು ಸಂಘವು ತೀವ್ರವಾಗಿ ಖಂಡಿಸುತ್ತದೆ ಅಲ್ಲದೆ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈ ಬಿಟ್ಟು ದೇಶದಿಂದಲೇ ಗಡಿಪಾರು ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ವಕೀಲರುಗಳಾದ ಪ್ರಸನ್ನ, ಮುರಳಿ,ಸೋಹನ್ ಕುಮಾರ್, ಶೇಖರ್, ಶ್ರೀಕಂಠು, ರವಿ, ಗಣೇಶ್ ,ಶ್ರೀನಿವಾಸ್, ಷಣ್ಮುಗ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು