3:49 PM Saturday20 - December 2025
ಬ್ರೇಕಿಂಗ್ ನ್ಯೂಸ್
ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.…

ಇತ್ತೀಚಿನ ಸುದ್ದಿ

ನಂಜನಗೂಡು: ಧಾರ್ಮಿಕ ಆಚರಣೆ ಸಂಬಂಧಿಸಿದ ವಿವಾದ; 2 ಗುಂಪುಗಳ ನಡುವೆ ಮಾತಿನ‌ ಚಕಮಕಿ; ಲಘು ಲಾಠಿ ಪ್ರಹಾರ

27/12/2023, 15:44

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ನಂಜನಗೂಡಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ, ಪರ -ವಿರೋಧ ಘೋಷಣೆಗಳ ನಡುವೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ ಘಟನೆ ನಡೆದಿದೆ.
ಸಂಪ್ರದಾಯದಂತೆ ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರನ ದೇವಾಲಯದ ವತಿಯಿಂದ ಪ್ರತಿವರ್ಷದಂತೆ ಅಂದಕಾಸುರನ ವಧೆ ಕಾರ್ಯಕ್ರಮವನ್ನು ನಡೆಸಲಾಗುತ್ತಿತ್ತು.‌ಪಟ್ಟಣದ ರಥ ಬೀದಿಯಲ್ಲಿರುವ ರಾಕ್ಷಸ ಮಂಟಪ ವೃತ್ತದಲ್ಲಿ ಅಂದಕಾಸುರನ (ಮಹಿಷಾಸುರನ) ಚಿತ್ರವಿರುವ ರಂಗೋಲಿ ಬಿಡಿಸಲಾಗುತ್ತದೆ
ನಂತರ ಶ್ರೀಕಂಠೇಶ್ವರ ಸ್ವಾಮಿ ಹಾಗೂ ಪಾರ್ವತಿ ದೇವಿಯ ಉತ್ಸವ ಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಮೆರವಣಿಗೆ ತಂದು ಮಹಿಷಾಸುರ ಆಕೃತಿಯ ರಂಗೋಲಿಯನ್ನು ತುಳಿದು ನಾಶ ಮಾಡುವುದೇ ಹಿಂದಿನಿಂದ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿದ್ದ ಅಂದಕಾಸುರನ ವಧೆಯ ಕಾರ್ಯಕ್ರಮ. ಅದರಂತೆ ಪಟ್ಟಣದ ರಾಕ್ಷಸ ಮಂಟಪ ವೃತ್ತದಲ್ಲಿ ಮಹಿಷಾಸುರ ಬ್ಯಾನರ್ ಅಳವಡಿಸಿ ರಂಗೋಲಿಯ ಚಿತ್ರವನ್ನು ಬಿಡಿಸಲಾಗಿತ್ತು. ಮಹಿಷಾಸುರನ ಚಿತ್ರವಿರುವ ಅಂದಕಾಸುರನ ವಧೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿದ ನೂರಾರು ದಸಂಸ ಕಾರ್ಯಕರ್ತರು ಸ್ಥಳದಲ್ಲಿ ಜಮಾಹಿಸಿ ಅಂದಕಾಸುರನ ವಧೆ ನಡೆಸದಂತೆ ತಡೆಗಟ್ಟಲು ಮುಂದಾದರು. ಅದೇ ಸಮಯಕ್ಕೆ ಚಾಮುಂಡೇಶ್ವರಿ ಹಾಗೂ ಶ್ರೀಕಂಠೇಶ್ವರ ಸ್ವಾಮಿಯ ಭಕ್ತರು ಸಹ ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕಾರ್ಯಕ್ರಮದ ಬೆಂಬಲಕ್ಕೆ ನಿಂತರು. ಇದರಿಂದಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದು ಒಂದು ಗುಂಪು ಶ್ರೀ ಶ್ರೀಕಂಠೇಶ್ವರ ನಿಗೆ ಜಯಕಾರ ಕೂಗಿದರೆ ದಸಂಸ ಕಾರ್ಯಕರ್ತರು ಮಹಿಷಾಸುರನಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಇದರಿಂದ ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಬಳಿಕ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಿದರು. ನಂತರ ದೇವಾಲಯದ ಆಗಮಿಕರು ಮತ್ತು ರಂಗೋಲಿಗೆ ಪೂಜೆ ಸಲ್ಲಿಸಿದ ಸಂದರ್ಭ ಹಾಗೂ ಪಾರ್ವತಿಗೆ ಉತ್ಸವಮೂರ್ತಿಗಳನ್ನು ಪಲ್ಲಕ್ಕಿಯಲ್ಲಿ ಹೊತ್ತು ತಂದ ಭಕ್ತರು ರಂಗೋಲಿ ಚಿತ್ರ ಹಾಗೂ ಬ್ಯಾನರನ್ನು ತುಳಿದು ಉತ್ಸವವನ್ನು ದೇವಾಲಯದ ಕಡೆಗೆ ಕೊಂಡೊಯ್ದದರು.


ಕಾರ್ಯಕ್ರಮ ಮುಗಿದ ನಂತರ ಎರಡು ಗುಂಪಿನವರು ಪೊಲೀಸರಿಗೆ ದೂರು ನೀಡಿ ನಮ್ಮ ನಮ್ಮ ಧಾರ್ಮಿಕತೆಗೆ ದಕ್ಕೆ ಉಂಟು ಮಾಡಿದ್ದಾರೆ ಎಂದು ಪರಸ್ಪರ ಆರೋಪಿಸಿದ್ದಾರೆ. ದಸಂಸ ಮುಖಂಡರುಗಳಾದ ಚುಂಚನಹಳ್ಳಿ ಮಲ್ಲೇಶ್, ಮಲ್ಲಳ್ಳಿ ನಾರಾಯಣ, ಶಂಕರಪುರ ಸುರೇಶ್,ಮಂಜು, ಸಿದ್ದು, ಬಾಲರಾಜು ಸೇರಿದಂತೆ ನೂರಾರು ಭಕ್ತರು ಹಾಗೂ ವಿವಿಧ ಪರ ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು