4:09 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು ದೇಬೂರು ಗ್ರಾಮದಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

10/03/2024, 14:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ದುಡಿಯುವ ಕೈಗಳಿಗೆ ಆಸರೆಯ ಗ್ಯಾರಂಟಿಯಾಗಿರುವ ಕೂಸಿನ ಮನೆ ಶಿಶುಪಾಲನ ಕೇಂದ್ರವನ್ನು ನಂಜನಗೂಡು ತಾಲೂಕು ದೇಬೂರು ಗ್ರಾಮದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಉದ್ಘಾಟಿಸಿದರು. ಮಕ್ಕಳಿಗೆ ಹಾಲು ನೀಡುವ ಮೂಲಕ ಕೂಸಿನ ಮನೆ ಶಿಶುಪಾಲನ ಕೇಂದ್ರಕ್ಕೆ ಚಾಲನೆ ನೀಡಿದರು.


ಬಳಿಕ ಅವರು ಮಾತನಾಡಿ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, 6 ತಿಂಗಳಿನಿಂದ 3 ವರ್ಷದ ಒಳಗಿನ ಮಕ್ಕಳ ತಾಯಂದಿರು ನರೇಗಾ ಯೋಜನೆಯಡಿ ದುಡಿಯುವುದಕ್ಕೆ ಹೊರಗಡೆ ಹೋದ ಸಂದರ್ಭ ಅವರ ಮಕ್ಕಳನ್ನು ಈ ಕೇಂದ್ರದಲ್ಲಿ ಎಂಟು ಗಂಟೆಗಳ ಕಾಲದವರೆಗೆ ಜವಾಬ್ದಾರಿಯಿಂದ ಲಾಲನೆ ಪಾಲನೆ ಮಾಡಿ ನಂತರ ಕೆಲಸ ಮುಗಿಸಿ ಬಂದ ತಾಯಂದಿರಿಗೆ ಮಕ್ಕಳನ್ನು ಮತ್ತೆ ವಾಪಸ್ ನೀಡುವ ಯೋಜನೆ ಇದಾಗಿರುತ್ತದೆ. ಈ ಭಾಗದ ಕೂಲಿ ಕಾರ್ಮಿಕ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾರ್ಯಕ್ರಮದ ಬಗ್ಗೆ ವಿವರಿಸಿದರು.
ಕಾರ್ಯಕ್ರಮಕ್ಕೆ ಬಂದ ಶಾಸಕರಿಗೆ ಗ್ರಾಮದ ಮಹಿಳೆಯರು ಆರತಿ ಮಾಡಿದರೆ ಪುರುಷರು ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷರಾದ ಕುರಟ್ಟಿ ಮಹೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ಮುಖಂಡರುಗಳಾದ ಸಿದ್ದಲಿಂಗಪ್ಪ, ಪಾಂಡು, ಮಹದೇವಪ್ಪ ಯೋಜನಾ ನಿರ್ದೇಶಕರಾದ ಶಿವಕುಮಾರ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಬಸವರಾಜ್ ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು