2:07 PM Thursday20 - November 2025
ಬ್ರೇಕಿಂಗ್ ನ್ಯೂಸ್
ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ… Mandya | ಶಿವನಸಮುದ್ರ: 4 ದಿನಗಳಿಂದ ನಾಲೆಯಲ್ಲಿ ಸಿಲುಕಿದ್ದ ಮರಿಯಾನೆಯ ರಕ್ಷಣೆ Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌…

ಇತ್ತೀಚಿನ ಸುದ್ದಿ

ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ

14/05/2024, 20:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ್ಲಿ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಗಂಧದಕಡ್ಡಿ ಫ್ಯಾಕ್ಟರಿಯಲ್ಲಿ
ಇದ್ದಕ್ಕಿದ್ದಂತೆ ಬೆಳಿಗ್ಗೆ 5 ಗಂಟೆ ಸಮಯಕ್ಕೆ ದಟ್ಟವಾದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ.


ದಟ್ಟವಾದ ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಮೂರು ಗಂಧದ ಕಡ್ಡಿ ತಯಾರು ಮಾಡುವ ಮಿಷನ್ ಗಳು ಸೇರಿದಂತೆ ಗಂಧದಕಡ್ಡಿ ತಯಾರು ಮಾಡುವ ಉತ್ಪನ್ನಗಳು ಗಂಧದಕಡ್ಡಿಯೂ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಅಲ್ಲದೆ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೂ ತಗುಲಿ ಗೃಹಪಯೋಗಿ ವಸ್ತುಗಳು ಸಹ ಸುಟ್ಟು ಕರಗಕಲಾಗಿ ನಷ್ಟ ಉಂಟಾಗಿದೆ.
ಬೆಂಕಿ ನಂದಿಸಲು ಅಕ್ಕಪಕ್ಕದ ಹಾಗೂ ಮೊಹಲ್ಲಾದ ನಿವಾಸಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಆಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು