9:35 AM Saturday15 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ನಂಜನಗೂಡು: ಗಂಧದ ಕಡ್ಡಿ ತಯಾರಿಕಾ ಘಟಕಕ್ಕೆ ಬೆಂಕಿ; ಲಕ್ಷಾಂತರ ಮೌಲ್ಯದ ಸೊತ್ತು ನಾಶ

14/05/2024, 20:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಳ್ಳಂ ಬೆಳಗ್ಗೆಯೇ ಗಂಧದ ಕಡ್ಡಿ ತಯಾರಿಕಾ ಘಟಕವೊಂದು ಹೊತ್ತಿ ಉರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಉರ್ದು ಸ್ಕೂಲ್ ಹಿಂಭಾಗದಲ್ಲಿ ಲ್ಲಿರುವ ಮುಸ್ಲಿಂ ಬ್ಲಾಕ್ ನಲ್ಲಿ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಗಂಧದಕಡ್ಡಿ ಫ್ಯಾಕ್ಟರಿಯಲ್ಲಿ
ಇದ್ದಕ್ಕಿದ್ದಂತೆ ಬೆಳಿಗ್ಗೆ 5 ಗಂಟೆ ಸಮಯಕ್ಕೆ ದಟ್ಟವಾದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡಿದೆ.


ದಟ್ಟವಾದ ಬೆಂಕಿಯಿಂದಾಗಿ ಫ್ಯಾಕ್ಟರಿಯಲ್ಲಿದ್ದ ಮೂರು ಗಂಧದ ಕಡ್ಡಿ ತಯಾರು ಮಾಡುವ ಮಿಷನ್ ಗಳು ಸೇರಿದಂತೆ ಗಂಧದಕಡ್ಡಿ ತಯಾರು ಮಾಡುವ ಉತ್ಪನ್ನಗಳು ಗಂಧದಕಡ್ಡಿಯೂ ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ.
ಅಲ್ಲದೆ ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಮನೆಗಳಿಗೂ ತಗುಲಿ ಗೃಹಪಯೋಗಿ ವಸ್ತುಗಳು ಸಹ ಸುಟ್ಟು ಕರಗಕಲಾಗಿ ನಷ್ಟ ಉಂಟಾಗಿದೆ.
ಬೆಂಕಿ ನಂದಿಸಲು ಅಕ್ಕಪಕ್ಕದ ಹಾಗೂ ಮೊಹಲ್ಲಾದ ನಿವಾಸಿಗಳು ಹರಸಾಹಸ ಪಟ್ಟರು ಯಾವುದೇ ಪ್ರಯೋಜನವಾಗಿಲ್ಲ.
ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಂದಿಸಿ ಆಗಬಹುದಾದ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು