4:25 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಖತರ್ನಾಕ್ ಕಳ್ಳನ ಕೈಚಳಕ; ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕಳವು

15/01/2024, 23:30

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಖತರ್ನಾಕ್ ಕಳ್ಳನೊಬ್ಬ ಮನೆ ಬಾಗಿಲು ಮೀಟಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಕದ್ದೋಯ್ದಿರುವ ಘಟನೆ ನಂಜನಗೂಡು ಪಟ್ಟಣದ ಕೆಂಪೇಗೌಡ ಲೇಔಟ್ ನಲ್ಲಿ ನಡೆದಿದೆ.


ನಂಜನಗೂಡಿನ ಹೆಸರಾಂತ ಸುರುಚಿ ಉಪ್ಪಿನಕಾಯಿ ಮಾಲೀಕ ವಿಶ್ವಚೇತನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ.
ಪಟ್ಟಣದ ಕೆಂಪೇಗೌಡ ಬಡಾವಣಿಯ 3ನೇ ಕ್ರಾಸ್ ನಲ್ಲಿ ವಿಶ್ವಚೇತನ್ ಹಾಗೂ ಕುಟುಂಬ ದವರು ಬಾಡಿಗೆಗೆ ಮನೆ ಪಡೆದಿದ್ದರು. ವಾರಾಂತ್ಯ ಮಕ್ಕಳಿಗೆ ಶಾಲಾ ರಜೆ ಇದ್ದ ಕಾರಣ ಮನೆಗೆ ಬೀಗ ಹಾಕಿ ತಮ್ಮ ಫ್ಯಾಕ್ಟರಿ ಮನೆಗೆ ಹೋಗಿದ್ದರು ಎನ್ನಲಾಗಿದೆ.
ಹಾಗಾಗಿ ಮನೆಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿರುವ ಕಳ್ಳ ತನ್ನ ಕೈ ಚಳಕ ತೋರಿ ಮನೆ ಬಾಗಿಲು ಮೀಟಿ ಒಳನುಗ್ಗಿ ಬೀರುವಿನಲ್ಲಿದ್ದ ಸುಮಾರು 200 ಗ್ರಾಂ ತೂಕದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುತ್ತಾನೆ.
ವಿಷಯ ತಿಳಿದು ಪಟ್ಟಣ ಠಾಣ ಇನ್ಸ್ಪೆಕ್ಟರ್ ಬಸವರಾಜು ಪಿಎಸ್ಐ ಶಿವಣ್ಣ ಸೇರಿದಂತೆ ಸಿಬ್ಬಂದಿಗಳು ಶ್ವಾನದಳ ಹಾಗೂ ಬೆರಳಚ್ಚು ತಜ್ಞರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ
ಮಾಲೀಕ ವಿಶ್ವಚೇತನ್ ಮಾತನಾಡಿ ಕಳ್ಳತನದ ಘಟನೆಯ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು