3:09 AM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ನಂಜನಗೂಡು: ಗ್ರಾಮಸ್ಥರು ತಿರುಗಾಡುವ ರಸ್ತೆಗೆ ಅಡ್ಡಿಪಡಿಸಿ ಮುಳ್ಳು ಚಾಚಿದ ಕಿಡಿಗೇಡಿಗಳು; ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳಿಗೂ ಧಮ್ಕಿ

23/02/2024, 20:44

*ಗ್ರಾಮದಲ್ಲಿ ಅಶಾಂತಿ ಮೂಡಿಸಲು ಬಂದ ಹೊರಗಿನವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಆಗ್ರಹ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲವಾರು ವರ್ಷಗಳಿಂದಲೂ ಗ್ರಾಮದ ಸಾರ್ವಜನಿಕರು ಸಂಚರಿಸುತ್ತಿದ್ದ ಸರ್ಕಾರಿ ರಸ್ತೆಗೆ ಏಕಾಏಕಿ ಮುಳ್ಳು ಚಾಚಿ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿದರಲ್ಲದೆ ರಸ್ತೆಗೆ ಡಕ್ ನಿರ್ಮಾಣ ಮಾಡಲು ಬಂದಿದ್ದ ನಗರಸಭೆ ಅಧಿಕಾರಿಗಳಿಗೂ ಮತ್ತು ಗ್ರಾಮಸ್ಥರಿಗೂ ಆವಾಜ್ ಹಾಕಿ ಕಾಮಗಾರಿಗೆ ತಡೆಹೊಡ್ಡಿದ ಘಟನೆ ನಂಜನಗೂಡು ಪಟ್ಟಣದ ಚಾಮಲಾಪುರದ ಹುಂಡಿ ಗ್ರಾಮದಲ್ಲಿ ನಡೆದಿದೆ.
ಪಟ್ಟಣದ ಚಾಮಲಾಪುರದ ಹುಂಡಿ ಗ್ರಾಮದ ಸರ್ವೆ ನಂಬರ್ 220 ಮತ್ತು 221ರಲ್ಲಿ ಸರ್ಕಾರಿ ಭೂಮಿಯಲ್ಲಿ ಬಂಡಿ ದಾರಿ ಇದೆ ಎಂದು ನಂಜನಗೂಡಿನ ರೆವಿನ್ಯೂ ಇಲಾಖೆ ಮತ್ತು ಸರ್ವೆ ಇಲಾಖೆಯಿಂದ ಅಳತೆ ಮಾಡಿಸಿ ದಾಖಲಾತಿ ಪತ್ರಗಳನ್ನು ನಂಜನಗೂಡಿನ ನಗರಸಭಾ ಅಧಿಕಾರಿಗಳಿಗೆ ನೀಡಲಾಗಿದೆ.
ಪೂರ್ಣ ಪ್ರಮಾಣದ ದಾಖಲಾತಿ ಜತೆಗೆ ಸಾಕಷ್ಟು ವರ್ಷಗಳಿಂದ ಸಾರ್ವಜನಿಕರು ತಿರುಗಾಡುವ ರಸ್ತೆಯ ಜಾಗ ನಮ್ಮದು ಎಂದು ಕೆಲವು ಹೊರಗಿನ ಮಧ್ಯವರ್ತಿಗಳು ಗ್ರಾಮಸ್ಥರಿಗೆ ಸಮಸ್ಯೆ ತಂದೊಡ್ಡಿದ್ದಾರೆ.
ಚಾಮಲಾಪುರದ ಹುಂಡಿ ಗ್ರಾಮದ ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಮತ್ತು ಗ್ರಾಮಸ್ಥರು ಇದಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರಿಗೆ ದೂರು ನೀಡಿದ ಪರಿಣಾಮ ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ದಾಖಲಾತಿ ಮತ್ತು ನಕ್ಷೆ ಪತ್ರಗಳನ್ನು ನೀಡಿದ್ದಾರೆ. ಆದರೂ ಕೆಲವು ಮದ್ಯವರ್ತಿಗಳು ಅವರ ಬಳಿ ಯಾವುದೇ ದಾಖಲಾತಿ ಇಲ್ಲದಿದ್ದರೂ ಇದಕ್ಕೆ ಒಪ್ಪದೇ ಇದು ರಸ್ತೆಯಲ್ಲ ನಮ್ಮ ಜಮೀನು ಎಂದು ಖ್ಯಾತೆ ತೆಗೆದು ಸಾರ್ವಜನಿಕರು ತಿರುಗಾಡುವ ರಸ್ತೆಗೆ ಅಡ್ಡಿ ಪಡಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ನಗರಸಭಾ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಗೆ ಹೊರಗಿನ ಕೆಲವು ಮಧ್ಯವರ್ತಿಗಳು ಹಾಗೂ ಅವರ ಸಂಬಂಧಿಕರು ಗಲಾಟೆಗೆ ಮುಂದಾಗಿ ತಿರುವಾಡುವ ರಸ್ತೆಗೆ ಮುಳ್ಳು ಚಾಚಿ ಮಾತಿನ ಚಕಮಕಿನಡೆಸಿ ಗಲಾಟೆಗೆ ಮುಂದಾಗಿದ್ದಾರೆ.


ಇದರಿಂದಾಗಿ ಘಟನೆಯ ಸೂಕ್ಷ್ಮತೆಯನ್ನರಿತ ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ತಿಳಿಗೊಳಿಸಿದರು. ಯಾವುದೇ ದಾಖಲೆ ನೀಡದೆ ಕಾಮಗಾರಿಗೆ ಅಡ್ಡಿಪಡಿಸಿದವರ ವಿರುದ್ಧ ದೂರು ದಾಖಲಿಸುವುದಾಗಿ ತಿಳಿಸಿ ನಗರಸಭಾ ಅಧಿಕಾರಿಗಳು ಸ್ಥಳದಿಂದ ಕಾಲ್ಕಿತ್ತರು. ಗ್ರಾಮಸ್ಥರು ಮತ್ತು ನಗರಸಭಾ ಮಾಜಿ ಅಧ್ಯಕ್ಷ ಶಂಕರ್ ಸಂಬಂಧಪಟ್ಟ ನಗರಸಭಾ ಇಲಾಖೆಗಳು ಕೂಡಲೇ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದಿದ್ದಲ್ಲಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು