4:58 PM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ನಂಜನಗೂಡು: ಗ್ರಾಮೀಣ ಪ್ರದೇಶದ ಮನೆಗಳ ಕದ ತಟ್ಟಿದ ವಿದ್ಯಾರ್ಥಿಗಳು; ಬಡವರ ಮನೆ ಬಾಗಿಲಿಗೆ ಸಂವಿಧಾನ ಪೀಠಿಕೆ

20/02/2024, 19:52

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜನರ ಮತ ಸೆಳೆಯುವ ಸಲುವಾಗಿ ಇಲ್ಲಸಲ್ಲದ ಸೌಲಭ್ಯಗಳನ್ನು ನಿಮ್ಮ ಮನೆಯ ಬಾಗಿಲಿಗೆ ತಲುಪಿಸುತ್ತೇವೆ ಎಂಬ ಭರವಸೆಯನ್ನು ಮಾತ್ರ ನೀಡುತ್ತಾರೆ . ಆದರೆ ವಸತಿ ಶಾಲೆಯ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಬಡಜನರ ಮನೆ ಬಾಗಿಲು ತಟ್ಟಿ ವಿನೂತನ ಜಾಗೃತಿ ಕಾರ್ಯಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.


ಹಾಗಾದ್ರೆ ಅದು ಏನು ಅಂತೀರಾ..! ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮದ ಬಳಿ ಇರುವ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಂದ ಮನೆ ಮನೆಗೆ ಸಂವಿಧಾನ ಜಾಗೃತಿ ಮತ್ತು ಮನ ಮನಕ್ಕೆ ಅಂಬೇಡ್ಕರ್ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಶಾಲೆಯ ಪ್ರಾಂಶುಪಾಲರಾದ ಎಸ್. ಸಿದ್ದರಾಜು ಹಾಗೂ ಶಿಕ್ಷಕರ ನೇತೃತ್ವದ ತಂಡ ವಿದ್ಯಾರ್ಥಿಗಳ ಜೊತೆಗೂಡಿ ಸಿಂಧುವಳ್ಳಿ ಗ್ರಾಮಕ್ಕೆ ತೆರಳಿ ಎಲ್ಲಾ ವರ್ಗದ ಜನರ ಬಡಾವಣೆಗಳಿಗೆ ಮತ್ತು ಮನೆಯ ಬಾಗಿಲಿಗೆ ತೆರಳಿ ಸಂವಿಧಾನದ ಪೀಠಿಕೆಯನ್ನು ಓದಿಸುವುದರ ಮೂಲಕ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ .
ಮನೆಗಳಿಗೆ ತೆರಳಿ ಮಹಿಳೆಯರು ಮತ್ತು ಮನೆಯ ಯಜಮಾನರುಗಳಿಗೆ ಗ್ರಾಮದ ಮುಖಂಡರುಗಳಿಗೆ ಸಂವಿಧಾನದ ಪೀಠಿಕೆಯನ್ನು ತೋರಿಸಿ ಅವರ ಬಾಯಿಂದ ಓದಿಸುವುದರ ಮೂಲಕ ಪ್ರಬುದ್ಧ ಸಮಾಜ ನಿರ್ಮಾಣಕ್ಕೆ ಮುಂದಾಗಿ ಅನಕ್ಷರತೆಯನ್ನು ತೊಲಗಿಸಿ ಕಡ್ಡಾಯವಾಗಿ ನಿಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಿ, ದೇಶದ ಸತ್ಪ್ರಜೆಗಳನ್ನಾಗಿ ಮಾಡಿ ಎಂಬ ಮಾಹಿತಿಯನ್ನು ನೀಡುವುದರ ಜೊತೆಗೆ ಸಂವಿಧಾನವನ್ನು ಉಳಿಸುವ ಜಾಗೃತಿಯನ್ನು ವಿದ್ಯಾರ್ಥಿಗಳು ಮತ್ತು ವಸತಿ ಶಾಲೆಯ ಶಿಕ್ಷಕರು ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಕಾರ್ಯವೈಖರಿಗೆ ನಂಜನಗೂಡಿನ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು