9:39 PM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಆರದ ಎರಡು ಕೋಮುಗಳ ಸಂಘರ್ಷ: ನಾಯಕ ಸಮುದಾಯದಿಂದ ಬೃಹತ್ ಪ್ರತಿಭಟನೆ

06/02/2024, 18:42

*ಹಲ್ಲರೆ ಗ್ರಾಮದ ಎರಡು ಕೋಮುಗಳ ಸಂಘರ್ಷಕ್ಕೆ ಜಿಲ್ಲಾ ಮತ್ತು ತಾಲೂಕು ಆಡಳಿತದ ವೈಫಲ್ಯವೇ ಕಾರಣ ಪ್ರತಿಭಟನೆಯಲ್ಲಿ ಗಂಭೀರ ಆರೋಪ*

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ಘರ್ಷಣೆ ಪ್ರಕರಣ ಖಂಡಿಸಿ ತಾಲ್ಲೂಕು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಲಾಯಿತು.


ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಜಿಲ್ಲಾ ಮತ್ತು ತಾಲ್ಲೂಕು ಆಡಳಿತದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು.
ಹಲ್ಲರೆ ಗ್ರಾಮದಲ್ಲಿ ನಡೆದ ಘಟನೆ ಖಂಡಿಸುತ್ತೇವೆ ಹಾಗೂ ನಾಯಕ ಜನಾಂಗದವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಿರಪರಾಧಿಗಳನ್ನು ಪೊಲೀಸರು ಕೂಡಲೇ ಬಿಡುಗಡೆ ಮಾಡಬೇಕು. ಗಲಾಟೆಗೆ ಪ್ರೇರೇಪಣೆ ನೀಡಿದವರನ್ನು ಕೂಡಲೇ ಬಂಧಿಸಬೇಕು. ಈ ಘಟನೆಯನ್ನು ನಿವೃತ್ತ ನ್ಯಾಯಮೂರ್ತಿಗಳಿಂದ ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಹಾಗೂ ಗ್ರಾಮದಲ್ಲಿ ಶಾಂತಿ ಸಭೆಯನ್ನು ನಡೆಸಬೇಕು ಎಂದು ಮುಖಂಡರು ಒತ್ತಾಯಿಸಿದರು. ನಂತರ ನಂಜನಗೂಡಿನ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರ್ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು. ನಂಜನಗೂಡಿನ ಡಿವೈಎಸ್ಪಿ ರಘು ರವರಿಂದ ಬಿಗಿ ಪೊಲೀಸ್ ಬಂದೋಬಸ್ತು ನೀಯೋಜನೆ ಮಾಡಲಾಗಿತ್ತು.
ಪ್ರತಿಭಟನೆಯಲ್ಲಿ ನಾಯಕ ಜನಾಂಗದ ಗೌರವಾಧ್ಯಕ್ಷ ಚಿಕ್ಕ ರಂಗನಾಯಕ,ತಾಲೂಕು ಅಧ್ಯಕ್ಷರಾದ ಬಂಗಾರಸ್ವಾಮಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರ, ಖಜಾಂಚಿ ರಂಗಸ್ವಾಮಿ ಮುಖಂಡರಾದ ಹೆಡತಲೆ ನಾಗರಾಜು, ದೊರೆಸ್ವಾಮಿನಾಯಕ,ಕೆ ಡಿ ಮಂಜು, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾಧ್ಯಕ್ಷ ರಾಮಚಂದ್ರು, ನಾಯಕರ ಯುವ ಸೇನೆ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಕಾಟೂರು ದೇವರಾಜ್ ಶಿವನಂಜನಾಯ್ಕ, ಶಿವಣ್ಣ, ಮಹಾದೇವ ನಾಯಕ ಹಾಗೂ ಮಹಿಳೆಯರು ಸೇರಿದಂತೆ ಸಾವಿರಾರು ಮುಖಂಡರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು