12:09 PM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು