6:01 PM Wednesday2 - July 2025
ಬ್ರೇಕಿಂಗ್ ನ್ಯೂಸ್
Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ… Kodagu | ಕುಶಾಲನಗರದ ಕೂಡಿಗೆಯಲ್ಲಿ ಚಿನ್ನದಂಗಡಿ ಮಾಲೀಕನ ಮನೆಗೆ ಕನ್ನ: 14 ಲಕ್ಷ… ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್…

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು