2:34 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ನಂಜನಗೂಡು: ಹಳ್ಳಿ ಸೊಗಡಿನ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ; ಕಲಾ ರಸಿಕರು ಫುಲ್ ಖುಷಿ

16/03/2024, 19:23

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ನೆಲತಾಳಪುರ ಗ್ರಾಮದಲ್ಲಿ ಶ್ರೀ ಚಿಕ್ಕದೇವಮ್ಮನವರ ಹಬ್ಬದ ಪ್ರಯುಕ್ತ ಕುರುಕ್ಷೇತ್ರ ಅಥವಾ ಧರ್ಮರಾಜ ಸ್ಥಾಪನೆ ಎಂಬ ಪೌರಾಣಿಕ ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.


ಗ್ರಾಮದ ಧರೆಗೆ ದೊಡ್ಡವರು ಮತ್ತು ಶ್ರೀ ಚಿಕ್ಕದೇವಮ್ಮನವರ ಕೃಪಾಪೋಷಿತ ನಾಟಕ ಮಂಡಳಿ ವತಿಯಿಂದ ಹೆಸರಾಂತ ಉಮೇಶ್ ಡ್ರಾಮಾ ಸೀನರಿ ಹಾಗೂ ವಿದ್ಯುತ್ ದೀಪಗಳಿಂದ ಅಲಂಕೃತವಾದ ಭವ್ಯ ರಂಗ ಮಂಟಪದಲ್ಲಿ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಚಿಕ್ಕರಂಗನಾಯಕ ಹಾಗೂ ಮತ್ತಿತರರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅವರು ಮಾತನಾಡಿ ಇಂದಿನ ಆಧುನಿಕತೆ ಸಿನಿಮಾ ರಂಗದ ನಡುವೆಯೂ ನಾಟಕ ರಂಗಭೂಮಿ ಉಳಿದಿರುವುದು ಹಳ್ಳಿಗಾಡಿನಲ್ಲಿ ಮಾತ್ರ. ಸಿನಿಮಾ ರಂಗದ ದಿಗ್ಗಜ ಡಾ. ರಾಜಕುಮಾರ್ ಕೂಡ ರಂಗಭೂಮಿಯಿಂದಲೇ ಬಂದವರು ಎಂದು ನಾಟಕ ರಂಗಭೂಮಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ನಾಟಕದಲ್ಲಿ ಒಳ್ಳೆಯ ಹಾಗೂ ಕೆಟ್ಟ ಸನ್ನಿವೇಶಗಳು ಮತ್ತು ಪಾತ್ರಗಳು ಬರುತ್ತವೆ. ಪ್ರೇಕ್ಷಕರಾದ ತಾವು ಕೆಟ್ಟದ್ದನ್ನು ಬದಿಗೊತ್ತಿ ಒಳ್ಳೆಯದನ್ನು ಮಾತ್ರ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಇದೇ ಸಂದರ್ಭ ವೇದಿಕೆ ಮೇಲಿನ ಗಣ್ಯರನ್ನು ನಾಟಕ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ನಂತರ ನಡೆದ ನಾಟಕ ಪ್ರದರ್ಶನದಲ್ಲಿ ಶ್ರೀ ಕೃಷ್ಣ, ಅರ್ಜುನ ಹಾಗೂ ಅಭಿಮನ್ಯು ಪಾತ್ರಧಾರಿಗಳು ಉತ್ತಮ ನಟನೆ ಮಾಡುವ ಮೂಲಕ ಪ್ರೇಕ್ಷಕರ ಮನಸೂರೆಗೊಂಡರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕೆಂಪಮ್ಮ ತೋಪನಾಯ್ಕ, ಸದಸ್ಯರಾದ ಶಶಿಕಲಾಪ್ರಭುಸ್ವಾಮಿ, ರಾಜೇಂದ್ರ, ನಂಜನಗೂಡು ನಗರ ಘಟಕದ ಬಿಜೆಪಿ ಅಧ್ಯಕ್ಷ ಹರ್ಷಿತ್ ಕುಮಾರ್, ಮುಖಂಡರುಗಳಾದ ರಾಮಶೆಟ್ಟಿ, ನಾಗೇಶ್, ಮಹೇಶ್ ಸೇರಿದಂತೆ ಗ್ರಾಮದ ಯಜಮಾನ್ರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು