2:38 AM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ

22/07/2024, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾಗಿದ್ದ ಮನೋಜ್ ಅವರು ನೀಡಿದ್ದ ರಾಜೀನಾಮೆ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಒಟ್ಟು 19 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿ ಗೆ ಇಂದು ನಡೆದ ಚುನಾವಣೆಯಲ್ಲಿ 18 ಸದಸ್ಯರು ಹಾಜರಿದ್ದು ಒಬ್ಬ ಸದಸ್ಯರು ಗೈರು ಹಾಜರಾಗಿರುತ್ತಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಾಂತರಾಜ್ ಹಾಗು ಕಾಂಗ್ರೆಸ್ ಬೆಂಬಲಿತ ಬಸವರಾಜ್ ನಾಮಪತ್ರ ಸಲ್ಲಿಸಿರುತ್ತಾರೆ. ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆದಿದೆ.
ನಂತರ ನಡೆದ ಚುನಾವಣೆಯಲ್ಲಿ ಕಾಂತರಾಜ್ ಅವರಿಗೆ 10 ಮತಗಳು ಬಸವರಾಜ್ ಅವರಿಗೆ 8 ಮತಗಳು ಬಂದ ಪರಿಣಾಮ 10 ಮತಗಳನ್ನು ಪಡೆದು ಕಾಂತರಾಜ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಾದ ಚಂದ್ರು ಘೋಷಣೆ ಮಾಡಿದರು.


ನೂತನ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಿಗೆ ಬಿಜೆಪಿ ಕಾರ್ಯಕರ್ತ ಮುಖಂಡರು ಸಿಹಿ ತಿನಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷ ಕಾಂತರಾಜ್ ಮತ್ತು ರಾಜ್ಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಅಧ್ಯಕ್ಷರ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದಾಗ ಎಲ್ಲಾ ಸದಸ್ಯರಿಗೆ ಕೃತಜ್ಞತೆ ತಿಳಿಸಿ ಎಲ್ಲರ ಸಹಕಾರ ಬೆಂಬಲದೊಂದಿಗೆ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಚುನಾವಣೆಯ ಬಗ್ಗೆ ವಿವರಿಸಿದರು.
ಸಹಾಯಕ ಚುನಾವಣಾಧಿಕಾರಿ ಸತೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸೇರಿದಂತೆ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು