5:44 AM Friday15 - August 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ ರಾಜ್ಯ ಸರಕಾರದ ವಿನೂತನ ಯೋಜನೆ: ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ಆ.… ಬಾಲ್ಯವಿವಾಹ ತಡೆಗಟ್ಟಲು ಸರ್ಕಾರದಿಂದ ಕಠಿಣ ಕ್ರಮ: ವಿಧಾನ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಮಶಾನ ಜಾಗ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮ: ವಿಧಾನಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಬಂಡೀಪುರ: ಕಾಡಾನೆ ಜತೆ ಸೆಲ್ಫಿಗೆ ಹೋಗಿ ದಾಳಿಗೊಳಗಾಗಿದ್ದ ವ್ಯಕ್ತಿಗೆ 25 ಸಾವಿರ ರೂ.… ವಿಶ್ವ ವಿಖ್ಯಾತ ಮೈಸೂರು ದಸರಾ: ಗಜಪಡೆಯ ತೂಕ ಪರೀಕ್ಷೆ; ಯಾರ್ಯಾರು, ಎಷ್ಟೆಷ್ಟು ಕೆಜಿ?

ಇತ್ತೀಚಿನ ಸುದ್ದಿ

ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ

22/07/2024, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾಗಿದ್ದ ಮನೋಜ್ ಅವರು ನೀಡಿದ್ದ ರಾಜೀನಾಮೆ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಒಟ್ಟು 19 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿ ಗೆ ಇಂದು ನಡೆದ ಚುನಾವಣೆಯಲ್ಲಿ 18 ಸದಸ್ಯರು ಹಾಜರಿದ್ದು ಒಬ್ಬ ಸದಸ್ಯರು ಗೈರು ಹಾಜರಾಗಿರುತ್ತಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಾಂತರಾಜ್ ಹಾಗು ಕಾಂಗ್ರೆಸ್ ಬೆಂಬಲಿತ ಬಸವರಾಜ್ ನಾಮಪತ್ರ ಸಲ್ಲಿಸಿರುತ್ತಾರೆ. ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆದಿದೆ.
ನಂತರ ನಡೆದ ಚುನಾವಣೆಯಲ್ಲಿ ಕಾಂತರಾಜ್ ಅವರಿಗೆ 10 ಮತಗಳು ಬಸವರಾಜ್ ಅವರಿಗೆ 8 ಮತಗಳು ಬಂದ ಪರಿಣಾಮ 10 ಮತಗಳನ್ನು ಪಡೆದು ಕಾಂತರಾಜ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಾದ ಚಂದ್ರು ಘೋಷಣೆ ಮಾಡಿದರು.


ನೂತನ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಿಗೆ ಬಿಜೆಪಿ ಕಾರ್ಯಕರ್ತ ಮುಖಂಡರು ಸಿಹಿ ತಿನಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷ ಕಾಂತರಾಜ್ ಮತ್ತು ರಾಜ್ಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಅಧ್ಯಕ್ಷರ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದಾಗ ಎಲ್ಲಾ ಸದಸ್ಯರಿಗೆ ಕೃತಜ್ಞತೆ ತಿಳಿಸಿ ಎಲ್ಲರ ಸಹಕಾರ ಬೆಂಬಲದೊಂದಿಗೆ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಚುನಾವಣೆಯ ಬಗ್ಗೆ ವಿವರಿಸಿದರು.
ಸಹಾಯಕ ಚುನಾವಣಾಧಿಕಾರಿ ಸತೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸೇರಿದಂತೆ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು