4:51 PM Tuesday25 - August 2026
ಬ್ರೇಕಿಂಗ್ ನ್ಯೂಸ್
ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ನಂಜನಗೂಡು ಹೆಗ್ಗಡಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಕಾಂತರಾಜ್ ಆಯ್ಕೆ

22/07/2024, 20:03

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕು ಹೆಗ್ಗಡ ಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾಂತರಾಜ್ ಆಯ್ಕೆಯಾಗಿದ್ದಾರೆ
ಅಧ್ಯಕ್ಷ ಸ್ಥಾನಕ್ಕೆ ಸದಸ್ಯರುಗಳ ಒಪ್ಪಂದದಂತೆ ಹಿಂದಿನ ಅಧ್ಯಕ್ಷರಾಗಿದ್ದ ಮನೋಜ್ ಅವರು ನೀಡಿದ್ದ ರಾಜೀನಾಮೆ ಪ್ರಯುಕ್ತ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು.
ಒಟ್ಟು 19 ಮಂದಿ ಸದಸ್ಯರಿರುವ ಗ್ರಾಮ ಪಂಚಾಯಿತಿ ಗೆ ಇಂದು ನಡೆದ ಚುನಾವಣೆಯಲ್ಲಿ 18 ಸದಸ್ಯರು ಹಾಜರಿದ್ದು ಒಬ್ಬ ಸದಸ್ಯರು ಗೈರು ಹಾಜರಾಗಿರುತ್ತಾರೆ.
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಕಾಂತರಾಜ್ ಹಾಗು ಕಾಂಗ್ರೆಸ್ ಬೆಂಬಲಿತ ಬಸವರಾಜ್ ನಾಮಪತ್ರ ಸಲ್ಲಿಸಿರುತ್ತಾರೆ. ಯಾರೊಬ್ಬರು ನಾಮಪತ್ರ ವಾಪಸ್ ಪಡೆಯದ ಹಿನ್ನೆಲೆ ಚುನಾವಣೆ ನಡೆದಿದೆ.
ನಂತರ ನಡೆದ ಚುನಾವಣೆಯಲ್ಲಿ ಕಾಂತರಾಜ್ ಅವರಿಗೆ 10 ಮತಗಳು ಬಸವರಾಜ್ ಅವರಿಗೆ 8 ಮತಗಳು ಬಂದ ಪರಿಣಾಮ 10 ಮತಗಳನ್ನು ಪಡೆದು ಕಾಂತರಾಜ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಾದ ಚಂದ್ರು ಘೋಷಣೆ ಮಾಡಿದರು.


ನೂತನ ಅಧ್ಯಕ್ಷರ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತ ಮುಖಂಡರು ಹಾಗೂ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ನೂತನ ಅಧ್ಯಕ್ಷರಿಗೆ ಬಿಜೆಪಿ ಕಾರ್ಯಕರ್ತ ಮುಖಂಡರು ಸಿಹಿ ತಿನಿಸಿ ಮಾಲಾರ್ಪಣೆ ಮಾಡುವ ಮೂಲಕ ಅಭಿನಂದಿಸಿದರು.
ಬಳಿಕ ನೂತನ ಅಧ್ಯಕ್ಷ ಕಾಂತರಾಜ್ ಮತ್ತು ರಾಜ್ಯ ಬಿಜೆಪಿ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಿಕ್ಕರಂಗನಾಯಕ ಮಾತನಾಡಿ ಅಧ್ಯಕ್ಷರ ಆಯ್ಕೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದಾಗ ಎಲ್ಲಾ ಸದಸ್ಯರಿಗೆ ಕೃತಜ್ಞತೆ ತಿಳಿಸಿ ಎಲ್ಲರ ಸಹಕಾರ ಬೆಂಬಲದೊಂದಿಗೆ ಪಂಚಾಯತಿ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ ಚುನಾವಣೆಯ ಬಗ್ಗೆ ವಿವರಿಸಿದರು.
ಸಹಾಯಕ ಚುನಾವಣಾಧಿಕಾರಿ ಸತೀಶ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಾಗರಾಜ್ ಸೇರಿದಂತೆ ಎಲ್ಲಾ ಸದಸ್ಯರುಗಳು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು