8:00 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ನಂಜನಗೂಡಿನ ಹೆಗ್ಗಡಹಳ್ಳಿಯಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ಗ್ರಾಮ ಘಟಕ ಉದ್ಘಾಟನೆ

24/06/2024, 19:11

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನಂಜನಗೂಡು ತಾಲೂಕು ಘಟಕದ ವತಿಯಿಂದ ಇಂದು ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಗ್ರಾಮ ಘಟಕ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಗ್ರಾಮ ಘಟಕದ ನಾಮಫಲಕ ಅನಾವರಣ ಹಾಗೂ ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹಾಗೂ ಮತ್ತಿತರ ಗಣ್ಯರು ಗಿಡಕ್ಕೆ ನೀರೆರೆಯುವ ಮೂಲಕ ನೆರವೇರಿಸಿದರು.
ಬಳಿಕ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ರೈತರ ಬದುಕನ್ನು ಹಸನಾಗಿಸುವ ಉದ್ದೇಶದಿಂದ ರೈತ ಸಂಘಟನೆ ಸ್ಥಾಪಿತವಾಗಿದೆ ರೈತರಿಗಾಗಿ, ರೈತರ ಬದುಕಿಗಾಗಿ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದೆ ಅಂತೆಯೇ ಈಗ ಈ ಭಾಗದ ಕಬಿನಿ ಜಲಾಶಯ ತುಂಬಿದ್ದು ಜಲಾಶಯದ ನಾಲೆಗಳ ವ್ಯಾಪ್ತಿಗೆ ಬರುವ ಎಚ್ ಡಿ ಕೋಟೆ, ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಶಾಸಕರು ಕೂಡಲೇ ರೈತರ ಸಭೆ ಕರೆದು ತಕ್ಷಣವೇ ಸರಿಯಾದ ಸಮಯಕ್ಕೆ ನೀರು ಬಿಟ್ಟು ಬಿತ್ತನೆ ಬೀಜ ಪೂರೈಕೆ ಮಾಡಬೇಕು. ತಡವಾದಲ್ಲಿ ಹೋರಾಟಕ್ಕೆ ಸಿದ್ಧವಾಗಬೇಕು ಎಂದು ಹೆಗ್ಗಡಹಳ್ಳಿ ರೈತ ಜಾಗೃತಿ ಸಭೆಯಿಂದಲೇ ಶಾಸಕರಿಗೆ ಎಚ್ಚರಿಕೆ ನೀಡುವ ಸಂದೇಶ ಕಳಿಸೋಣ ಎಂದು ರೈತರಿಗೆ ಕರೆ ನೀಡಿದರು.
ರಾಜ್ಯ ರೈತ ಸಂಘದ ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್ ಮಾತನಾಡಿ, ರೈತ ಸಂಘ ಎಂದರೇನು? ಅದರ ದ್ಯೇಯೋದ್ದೇಶ, ಅದರಿಂದ ಆಗುವ ಅನುಕೂಲದ ಬಗ್ಗೆ ಮತ್ತು ಯಾವ ಕಾರಣಕ್ಕೆ ರೈತರಿಗೆ ಸಂಘಟನೆ ಬೇಕು ಎನ್ನುವುದರ ಬಗ್ಗೆ ಸಾರ್ವಜನಿಕರಲ್ಲಿ ರೈತ ಸಂಘಟನೆಯ ಬಗ್ಗೆ ಅರಿವು ಮೂಡಿಸಿದರು.
ಇದೇ ಸಂದರ್ಭ ಗ್ರಾಮದ ನೂರಾರು ಮುಖಂಡರು ಹಾಗೂ ಯುವಕರು ನೂತನವಾಗಿ ರೈತ ಸಂಘಕ್ಕೆ ಸೇರ್ಪಡೆಗೊಂಡರು.
ಹೊಸದಾಗಿ ಸೇರ್ಪಡೆಗೊಂಡ ಸದಸ್ಯರನ್ನು ರಾಜ್ಯ ಹಾಗೂ ಜಿಲ್ಲಾ ರೈತ ಮುಖಂಡರು ಹಸಿರು ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹಿಮ್ಮಾವುರಘು, ಹರತಲೆ ಕೆಂಪಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮನೋಜ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ, ಪ್ರಕಾಶ್, ಮಹದೇವಸ್ವಾಮಿ, ಶ್ವೇತಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು