8:09 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ನಂಜನಗೂಡು: ಹೆಮ್ಮರಗಾಲ ಪಿಎಸಿಸಿ ಬ್ಯಾಂಕ್ ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ

27/08/2024, 19:28

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಹೆಮ್ಮರ ಗಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಸಿ. ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.
ಸಂಘದ ಆವರಣದಲ್ಲಿ ನಡೆದ ಸಭೆಯ ಉದ್ಘಾಟನೆಯನ್ನು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಹಿರಿಯ ಸದಸ್ಯರು ದೀಪ ಬೆಳಗುವ ಮೂಲಕ ನೆರವೇರಿಸಿದರು. ಬಳಿಕ ಸಂಘದ ಅಧ್ಯಕ್ಷ ಸೋಮಣ್ಣ ಮಾತನಾಡಿ ಸಹಕಾರ ಸಂಘ ಇರುವುದೇ ಸದಸ್ಯರ ಹಾಗೂ ರೈತರ ಅನುಕೂಲಕ್ಕಾಗಿ ಸಂಘದಿಂದ ಜೀರೋ ಪರ್ಸೆಂಟ್ ಬಡ್ಡಿದರದಲ್ಲಿ 5 ಲಕ್ಷದವರೆಗೆ ಸಾಲ ನೀಡಲಾಗುತ್ತದೆ. ರೈತರು ಇದನ್ನು ಪಡೆದು ಸಕಾಲದಲ್ಲಿ ಸಾಲ ಮರು ಪಾವತಿ ಮಾಡಿದರೆ ಸಂಘಕ್ಕು ಒಳ್ಳೆಯ ಲಾಭ ಬರುತ್ತದೆ ಹಾಗೂ ತಮಗೂ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ. ಹಾಗಾಗಿ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿ ಈ ಸಾಲಿನಲ್ಲಿ ಸಂಘವು ಲಾಭದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುದ್ದು ಮಾದಸ್ವಾಮಿ ಸಂಘದ 2023-24ನೇ ಸಾಲಿನ ಆಡಿಟ್ ಆದ ಜಮಾ, ಖರ್ಚು, ಲಾಭ, ನಷ್ಟದ ಬಗ್ಗೆ ಓದಿ ಸಭೆಗೆ ತಿಳಿಸಿದರು.
ಈ ಸಂದರ್ಭ ಕೆಲವು ಸದಸ್ಯರು ಮಾತನಾಡಿ ಹಿಂದಿನ ಕಾರ್ಯದರ್ಶಿ ಅಧಿಕಾರ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಣ ದುರುಪಯೋಗದ ಬಗ್ಗೆ ಪ್ರಸ್ತಾಪ ಮಾಡಿದರು. ಹಾಗೆಯೆ ಸಂಘವು ಲಾಭಾಂಶದಲ್ಲಿರುವದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ವತಿಯಿಂದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣ ಮಾಜಿ ಅಧ್ಯಕ್ಷರಾದ ಪುಟ್ಟರಾಜನಾಯಕ, ನಾಗರಾಜು ಸೇರಿದಂತೆ ನಿರ್ದೇಶಕರುಗಳಾದ ವೃಷಭೇಂದ್ರಪ್ಪ ,ಪುಟ್ಟ ಮಾದಯ್ಯ, ಚಿನ್ನಸ್ವಾಮಿ, ಮೀನಾಕ್ಷಿ, ಮಹಾದೇವ, ಶಿವ ನಾಗೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು