9:43 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಹುಲ್ಲಹಳ್ಳಿ ಹಾಗೂ ಕಳಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

06/04/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಾಂಗ್ರೆಸ್ ವತಿಯಿಂದ ಹುಲ್ಲಹಳ್ಳಿ ಹಾಗೂ ಕಳಲೆ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು.
ಸಭೆಯ ಉದ್ಘಾಟನೆಯನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಸೇರಿದಂತೆ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ವಿಧಾನಸಭಾ ಚುನಾವಣೆಯಂತೆ ಈ ಚುನಾವಣೆಯಲ್ಲಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಗುವುದಿಲ್ಲ. ಹಾಗಾಗಿ ಈ ರೀತಿ ಜಿಲ್ಲಾ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಸಭೆ ಕರೆದು ಮತಯಾಚನೆ ಮಾಡುತ್ತಿದ್ದೇನೆ.


ನಾನು ಕೂಡ ನಂಜನಗೂಡಿನಲ್ಲಿ ಹುಟ್ಟಿದವನು. ಹಾಗಾಗಿ ನಿಮ್ಮ ಮನೆಯ ಮಗನೆಂದು ತಿಳಿದು ನನಗೆ ಆಶೀರ್ವದಿಸಿ. ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತ ಮುಖಂಡರಿಗೆ ತಿಳಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ್ ಕುಮಾರ್ ಮಾತನಾಡಿ, ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಆಯಾಯ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಹುಲ್ಲಹಳ್ಳಿ ಬಸವರಾಜ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ,ಮುಖಂಡರುಗಳಾದ ಇಂಧನ ಬಾಬು, ಬುಲೆಟ್ ಮಹಾದೇವಪ್ಪ, ಮಂಜುನಾಥ್, ಗಿರೀಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಕಳಲೆ ಮಹೇಶ್, ಕರಳಪುರ ನಾಗರಾಜ್, ಚಾಮರಾಜ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು