10:01 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ನಂಜನಗೂಡು: ಹುಣ್ಣಿಮೆ ಪ್ರಯುಕ್ತ ಶ್ರೀ ನಂಜುಂಡೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ

24/02/2024, 21:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆಇಂದು ಹುಣ್ಣಿಮೆ ಪ್ರಯುಕ್ತ ಭಕ್ತ ಸಾಗರವೇ ಹರಿದು ಬಂದಿದೆ.
ಸಾವಿರಾರು ಸಂಖ್ಯೆಯ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು.


ಹುಣ್ಣಿಮೆ ಪ್ರಯುಕ್ತ ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್‌ ನೇತೃತ್ವದಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಗೆ ಫಲಪಂಚಾಮೃತಾಭಿಷೇಕ, ಕ್ಷೀರ, ಎಳನೀರು ಹಾಗೂ ಗಂಗಾ ಜಲದ ಅಭಿಷೇಕಗಳನ್ನು ನೆರವೇರಿಸಿ ಬಗೆಬಗೆಯ ಪುಷ್ಪಗಳಿಂದ ಶ್ರೀ ನಂಜುಂಡೇಶ್ವರ ಸ್ವಾಮಿಯನ್ನು ಅಲಂಕೃತಗೊಳಿಸಿ ನಂತರ ಮಹಾಮಂಗಳಾರತಿಯೊಂದಿಗೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಯಿತು.
ವಿವಿಧೆಡೆಯಿಂದ ಬಂದ ಸಾವಿರಾರು ಭಕ್ತರು ಇಂದು ಬೆಳಿಗ್ಗೆಯಿಂದಲೇ ಕಪಿಲಾ ನದಿಯಲ್ಲಿ ಪುಣ್ಯ ಸ್ನಾನ ಮಾಡಿ, ಉರುಳು ಸೇವೆ, ಧೂಪ ದೀಪದ ಸೇವೆ, ತುಲಾಭಾರ ಸೇವೆ ಮಾಡಿ ಭಕ್ತಿ ಭಾವ ಮೆರೆದು
ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದಿದ್ದಾರೆ. ದೇವಾಲಯಕ್ಕೆ ಬಂದ ಎಲ್ಲಾ ಭಕ್ತರಿಗೆ ದಾಸೋಹ ಭವನದಲ್ಲಿ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು