8:00 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ನಂಜನಗೂಡು: ಕೈಹಿಡಿದ ಮಡದಿಯನ್ನೇ ನದಿಗೆ ತಳ್ಳಿ ಕೊಲೆ; ಆರೋಪಿ ಪತಿ ಬಂಧನ

16/12/2021, 09:56

ಮೈಸೂರು(reporterkarnataka.com):  ಕೈ ಹಿಡಿದ ಮಡದಿಯನ್ನೇ ಕಪಿಲಾ ನದಿಗೆ ತಳ್ಳಿ ಕೊಲೆ ಮಾಡಿದ ಆರೋಪದಲ್ಲಿ  ನಂಜನಗೂಡು ಪೊಲೀಸರು ಪತಿಯನ್ನು ಬಂಧಿಸಿದ್ದಾರೆ.

ನಂಜನಗೂಡು ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯ ಸಮೀಪ ಕಪಿಲಾ ನದಿಗೆ ತನ್ನ ಪತ್ನಿ ದೇವಿ (28)ಯನ್ನು ತಳ್ಳಿ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಮುದ್ದಹಳ್ಳಿ ಗ್ರಾಮದ ರಾಜೇಶ್ ಕೊಲೆ ಮಾಡಿದ ಆರೋಪಿಯಾಗಿದ್ದು, ನದಿಯಲ್ಲಿ ಮುಳುಗಿಸಿ ಸಾಯಿಸಲು ಮುಂದಾದ ವೇಳೆ ಮೀನುಗಾರರು ತಡೆದು ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ.

ಮಂಗಳವಾರ ಗ್ರಾಮದಿಂದ ನಂಜನಗೂಡು ಪಟ್ಟಣದ ಸ್ಕ್ಯಾನಿಂಗ್ ಸೆಂಟರ್ ಗೆ ಆರೋಪಿ ರಾಜೇಶ್, ಪತ್ನಿ ದೇವಿ ಮತ್ತು ಮಕ್ಕಳು ಆಗಮಿಸಿದ್ದರು.

ಈ ವೇಳೆ ದೇವಾಲಯಕ್ಕೆ ಹೋಗೋಣ ಬಾ ಎಂದು ಕರೆದೊಯ್ದು, ಅಯ್ಯಪ್ಪಸ್ವಾಮಿ ದೇವಾಲಯದ ಬಳಿ ಕಪಿಲಾ ನದಿಗೆ ತಳ್ಳಿ ಕೊಲೆಗೈದಿದ್ದಾನೆ ಎನ್ನಲಾಗಿದೆ. 

 ಘಟನೆ ಸಂಬಂಧ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಶವವನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು