10:50 AM Saturday20 - December 2025
ಬ್ರೇಕಿಂಗ್ ನ್ಯೂಸ್
ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ…

ಇತ್ತೀಚಿನ ಸುದ್ದಿ

ನಂಜನಗೂಡು: ಕಳಲೆ ಜಾತ್ರಾ ಮಹೋತ್ಸವದಲ್ಲಿ ನಡೆದ ಅದ್ದೂರಿ ತೇರಡಿ ಉತ್ಸವ

29/03/2024, 12:31

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ತಾಲೂಕಿನ ಕಳಲೆ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿಕಾಂತ ಸ್ವಾಮಿ ದೇವಾಲಯದಲ್ಲಿ ನಡೆದ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ರಾತ್ರಿ ಪುಷ್ಪಾಲಂಕಾರ ತೇರಡಿ ಹಾಗೂ ಶಾಂತ್ಯುತ್ಸವವು ಬಹಳ ವಿಜೃಂಭಣೆ ಹಾಗೂ ಶ್ರದ್ಧಾ ಭಕ್ತಿಯಿಂದ ನೆರವೇರಿತು.


ಬೆಳಗ್ಗೆ ರಥಾರೋಹಣ ನಡೆದ ಮೇಲೆ ರಾತ್ರಿ ವೇಳೆಗೆ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ಆಂಡಾಳಮ್ಮ ಹಾಗೂ ಶ್ರೀ ಅರವಿಂದ ನಾಯಕಿ ಅಮ್ಮನವರ ಸಮೇತ ಶ್ರೀ ಲಕ್ಷ್ಮಿಕಾಂತ ಸ್ವಾಮಿ ಅವರ ಉತ್ಸವ ಮೂರ್ತಿಗಳನ್ನು ಹೊರ ತೆಗೆದು ಬಳಿಕ ಮೇಲುಕೋಟೆ ಶ್ರೀ ವೈರಮುಡಿ ಉತ್ಸವದ ಮಾದರಿಯಲ್ಲಿ ವಿಶೇಷವಾಗಿ ಹೂಗಳಿಂದ ಅಲಂಕರಿಸಲಾದ ಉತ್ಸವ ಮೂರ್ತಿಗಳನ್ನು ಶುಕ್ರವಾರದ ಬೆಳಗಿನ ಜಾವದವರೆಗೂ ಗ್ರಾಮದಲ್ಲಿ ಉತ್ಸವ ನಡೆಸಲಾಗುತ್ತದೆ. ವಿದ್ಯುತ್ ದೀಪಗಳಿಂದ ವಿಶೇಷವಾಗಿ ಮಂಟಪದ ರೀತಿಯಲ್ಲಿ ಅಲಂಕರಿಸಿದ ನಡು ಚಪ್ಪರದಲ್ಲಿ ಅಲಂಕೃತ ಉತ್ಸವ ಮೂರ್ತಿಗಳನ್ನು ಗ್ರಾಮಸ್ಥರು ಹೆಗಲ ಮೇಲೆ ಹೊತ್ತು ನಡೆಸುವ ಉತ್ಸವವನ್ನು ಭಕ್ತರು ಕಣ್ತುಂಬಿಕೊಂಡು ದೇವರಿಗೆ ಪೂಜೆ ಸಲ್ಲಿಸುವ ಮೂಲಕ ತಮ್ಮ ಭಕ್ತಿ ಭಾವ ಮೆರೆದರು.
ತೇರಡಿ ಉತ್ಸವದ ಅಂಗವಾಗಿ ಗ್ರಾಮದ ಎಲ್ಲ ದೇವಾಲಯಗಳು ಸೇರಿದಂತೆ ರಥ ಬೀದಿಗಳನ್ನು ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಅಹೋರಾತ್ರಿ ಮಂಗಳವಾದ್ಯ ಗೋಷ್ಠಿಗಳು ನಡೆದವು.
ತಿಂಡಿ ತಿನಿಸು, ಪೂಜಾ ಸಾಮಗ್ರಿಗಳು, ಸ್ಟೇಷನರಿ, ತಂಪು ಪಾನೀಯ ಸೇರಿದಂತೆ ವಿವಿಧ ಬಗೆಯ ಅಂಗಡಿ ಮುಂಗಟ್ಟುಗಳನ್ನು ತೆರೆದಿದ್ದು ವ್ಯಾಪಾರ ವಹಿವಾಟುಗಳು ಜೋರಾಗಿಯೇ ನಡೆದವು.
ಗ್ರಾಮವು ಸೇರಿದಂತೆ ಅಕ್ಕಪಕ್ಕದ ಗ್ರಾಮಗಳ ಸಾವಿರಾರು ಭಕ್ತರು ತೇರಡಿ ಉತ್ಸವದಲ್ಲಿ ಪಾಲ್ಗೊಂಡು ಸಂಭ್ರಮಿಸಿದರು.
ದೇವಾಲಯದ ಪಾರುಪತೆಗಾರ ಜಯರಾಮ್ ಹಾಗೂ ಗ್ರಾಮಸ್ಥರ ನೇತೃತ್ವದಲ್ಲಿ ತೇರಡಿ ಉತ್ಸವವು ಅದ್ದೂರಿಯಾಗಿ ನಡೆಯಿತು. ಆಗಮಿಕರಾದ ವಿನಯ್ ಭಟ್ ಮಾತನಾಡಿ ಉತ್ಸವದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು