9:56 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ನಂಜನಗೂಡು: ಕಪಿಲ ನದಿಯ ಸುಳಿಗೆ ಸಿಲುಕಿ ಬಾಲಕ ಸಹಿತ 3 ಮಂದಿ ಅಯ್ಯಪ್ಪ ಮಾಲಾಧಾರಿಗಳ ದಾರುಣ ಸಾವು

19/01/2024, 15:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳುದಿರುವ ಘಟನೆ ನಡೆದಿದೆ.
ತುಮಕೂರು ಮೂಲದ ಗವಿ ರಂಗ 19 ವರ್ಷ ರಾಕೇಶ್ 19 ವರ್ಷ ಹಾಗೂ ಅಪ್ಪು 16 ವರ್ಷದ ಅಯ್ಯಪ್ಪ ಮಾಲದಾರಿಗಳು ಕಪಿಲಾ ನದಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.


ಅಯ್ಯಪ್ಪನ ದರ್ಶನ ಮುಗಿಸಿಕೊಂಡು ತಡರಾತ್ರಿ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡುವ ಸಲುವಾಗಿ ಆಗಮಿಸಿದ ಅಯ್ಯಪ್ಪ ಭಕ್ತರು ಬೆಳಂಬೆಳಗ್ಗೆ ಸ್ನಾನ ಮಾಡಿ ನಂಜನಗೂಡಿನ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದರ್ಶನ ಮಾಡುವ ಸಲುವಾಗಿ ಸ್ನಾನಕ್ಕೆಂದು ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ 5 ಜನ ಮಾಲಾದಾರಿಗಳು ನೀರಿಗಿಳಿದು ಸುಳಿಗೆ ಸಿಲುಕಿದ ಪರಿಣಾಮ ಮೂವರು ಮೇಲೆಳಲಾಗದೆ ಮೃತಪಟ್ಟರೆ ಇಬ್ಬರು ಮಾಲದಾರಿಗಳು ಜೀವ ರಕ್ಷಿಸಿಕೊಂಡಿದ್ದಾರೆ.
ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಮೂರು ಮಂದಿ ಮಾಲಾಧಾರಿಯ ಶವಗಳನ್ನು ಹೊರ ತೆಗೆಯಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು