4:16 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು: ಕಪಿಲ ನದಿಯ ಸುಳಿಗೆ ಸಿಲುಕಿ ಬಾಲಕ ಸಹಿತ 3 ಮಂದಿ ಅಯ್ಯಪ್ಪ ಮಾಲಾಧಾರಿಗಳ ದಾರುಣ ಸಾವು

19/01/2024, 15:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಪಟ್ಟಣದ ಕಪಿಲ ನದಿಯ ಹೆಜ್ಜಿಗೆ ಸೇತುವೆ ಬಳಿ ಬೆಳ್ಳಂಬೆಳಗ್ಗೆ ಸ್ನಾನ ಮಾಡಲು ನದಿಗೆ ಇಳಿದ ಐವರ ಪೈಕಿ ಮೂವರು ನೀರು ಪಾಲಾಗಿ ಇನ್ನುಳಿದ ಇಬ್ಬರು ಬದುಕುಳುದಿರುವ ಘಟನೆ ನಡೆದಿದೆ.
ತುಮಕೂರು ಮೂಲದ ಗವಿ ರಂಗ 19 ವರ್ಷ ರಾಕೇಶ್ 19 ವರ್ಷ ಹಾಗೂ ಅಪ್ಪು 16 ವರ್ಷದ ಅಯ್ಯಪ್ಪ ಮಾಲದಾರಿಗಳು ಕಪಿಲಾ ನದಿಯಲ್ಲಿ ಜೀವ ಕಳೆದುಕೊಂಡಿದ್ದಾರೆ.


ಅಯ್ಯಪ್ಪನ ದರ್ಶನ ಮುಗಿಸಿಕೊಂಡು ತಡರಾತ್ರಿ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ದರ್ಶನ ಮಾಡುವ ಸಲುವಾಗಿ ಆಗಮಿಸಿದ ಅಯ್ಯಪ್ಪ ಭಕ್ತರು ಬೆಳಂಬೆಳಗ್ಗೆ ಸ್ನಾನ ಮಾಡಿ ನಂಜನಗೂಡಿನ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದರ್ಶನ ಮಾಡುವ ಸಲುವಾಗಿ ಸ್ನಾನಕ್ಕೆಂದು ಕಪಿಲಾ ನದಿಯ ಹೆಜ್ಜೆಗೆ ಸೇತುವೆಯ ಬಳಿ 5 ಜನ ಮಾಲಾದಾರಿಗಳು ನೀರಿಗಿಳಿದು ಸುಳಿಗೆ ಸಿಲುಕಿದ ಪರಿಣಾಮ ಮೂವರು ಮೇಲೆಳಲಾಗದೆ ಮೃತಪಟ್ಟರೆ ಇಬ್ಬರು ಮಾಲದಾರಿಗಳು ಜೀವ ರಕ್ಷಿಸಿಕೊಂಡಿದ್ದಾರೆ.
ನಂಜನಗೂಡು ಪಟ್ಟಣದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಮೃತಪಟ್ಟ ಮೂರು ಮಂದಿ ಮಾಲಾಧಾರಿಯ ಶವಗಳನ್ನು ಹೊರ ತೆಗೆಯಲಾಗಿದೆ. ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು