4:10 PM Sunday18 - January 2026
ಬ್ರೇಕಿಂಗ್ ನ್ಯೂಸ್
ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ನಂಜನಗೂಡು: ಕಪಿಲಾರತಿ ಪ್ರಯುಕ್ತ ಹೋಮ, ಹವನ ಹಾಗೂ ವಿಶೇಷ ಪೂಜೆ

14/12/2024, 20:08

ಮೋಹನ್ ನಂಜನಗೂಡು ಮೈಸೂರು

info.reporter Karnataka@gmail.com

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಪಿಲಾರತಿ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ನದಿಯ ಮಧ್ಯ ಭಾಗದಲ್ಲಿರುವ 16 ಕಾಲು ಮಂಟಪದಲ್ಲಿ ಸ್ಥಳ ಪುರೋಹಿತರಾದ ಶ್ರೀ ಕೃಷ್ಣ ಜೋಯಿಸ್ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು.


ಲೋಕಕಲ್ಯಾಣಕ್ಕಾಗಿ ಬೆಳಿಗ್ಗೆಯಿಂದಲೇ ಹೋಮ ಹವನ ನೆರವೇರಿಸಿ ಮಂಟಪದಲ್ಲಿ ಶ್ರೀಕಂಠೇಶ್ವರ ಸ್ವಾಮಿಯವರ ಲಿಂಗ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅದಕ್ಕೆ ಜಾತಿ ಮತ ಭೇದವಿಲ್ಲದೆ ಎಲ್ಲಾ ಸಾರ್ವಜನಿಕ ಭಕ್ತರಿಂದ ಅಭಿಷೇಕವನ್ನು ಮಾಡಿಸಲಾಯಿತು. ಪಟ್ಟಣದ ವಿವಿಧಡೆಯಿಂದ ಬಂದ ನೂರಾರು ಭಕ್ತರು ಶಿವಲಿಂಗಕ್ಕೆ ಅಭಿಷೇಕ ಮಾಡುವ ಮೂಲಕ ತಮ್ಮ ಭಕ್ತಿ ನಮನ ಸಲ್ಲಿಸಿದರು. ನಂತರ ಶಿವನ ರೂಪದಲ್ಲಿ ಅಲಂಕೃತಗೊಂಡ ಶ್ರೀಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೂಜಾ ಕಾರ್ಯವನ್ನು ನೆರವೇರಿಸಿದ ಬಳಿಕ ಕೃಷ್ಣ ಜೋಯಿಸ್ ಹಾಗೂ ಯುವ ಬ್ರಿಗೇಡ್ ಮುಖಂಡ ಚಂದ್ರಶೇಖರ್ ಮಾತನಾಡಿ ಕಪಿಲಾರತಿ ಹಾಗೂ ಹದಿನಾರು ಕಾಲು ಮಂಟಪದ ವಿಶೇಷತೆ ಬಗ್ಗೆ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು