11:25 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ನಂಜನಗೂಡು: ಕಾರ್ತಿಕ ಮಾಸದ ಕಡೆ ಶುಕ್ರವಾರ ಅಂಗವಾಗಿ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ದಂಡು

02/08/2024, 23:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಕಡೆ ಕಾರ್ತಿಕ ಮಾಸದ ಅಂಗವಾಗಿ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಕಾರ್ತಿಕ ಮಾಸದ ಕಡೆ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.


ಸಾವಿರಾರು ಭಕ್ತರು ಇಂದು ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ಬಂದು ಶ್ರೀ ಅಮ್ಮನವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.
ವಿಶೇಷವಾಗಿ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಾಯಿಗೆ ನಿಂಬೆಹಣ್ಣು ಆರತಿ ಮಾಡಲು ದೇವಾಲಯದ ಒಳ ಹಾಗೂ ಹೊರ ಆವರಣಗಳಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದರು.
ದೇವಾಲಯದ ಹೊರ ಆವರಣದಲ್ಲಿ ಭಕ್ತರು ನಿಂಬೆ ಹಣ್ಣು ಆರತಿ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ನಂಜನಗೂಡು ಪಟ್ಟಣವು ಸೇರಿದಂತೆ ವಿವಿದೆಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು.
ಇದೇ ಸಂದರ್ಭ ಬಂದ ಎಲ್ಲಾ ಭಕ್ತರಿಗೆ ಕರ್ನಾಟಕ ರಕ್ಷಣಾ ಪಡೆ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವೈದ್ಯನಾಥ ದೀಕ್ಷಿತ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು