1:50 AM Tuesday22 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕಾರ್ತಿಕ ಮಾಸದ ಕಡೆ ಶುಕ್ರವಾರ ಅಂಗವಾಗಿ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ದಂಡು

02/08/2024, 23:06

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯಕ್ಕೆ ಕಡೆ ಕಾರ್ತಿಕ ಮಾಸದ ಅಂಗವಾಗಿ ಭಕ್ತರ ಮಹಾಪೂರವೇ ಹರಿದು ಬಂದಿತ್ತು. ಕಾರ್ತಿಕ ಮಾಸದ ಕಡೆ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಮೂರ್ತಿಯನ್ನು ಬಣ್ಣ ಬಣ್ಣದ ಹೂಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.


ಸಾವಿರಾರು ಭಕ್ತರು ಇಂದು ಬೆಳಗ್ಗಿನಿಂದಲೇ ಸರತಿ ಸಾಲಿನಲ್ಲಿ ಬಂದು ಶ್ರೀ ಅಮ್ಮನವರ ದರ್ಶನ ಪಡೆದು ತಮ್ಮ ಭಕ್ತಿ ಭಾವ ಮೆರೆದರು.
ವಿಶೇಷವಾಗಿ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿ ತಾಯಿಗೆ ನಿಂಬೆಹಣ್ಣು ಆರತಿ ಮಾಡಲು ದೇವಾಲಯದ ಒಳ ಹಾಗೂ ಹೊರ ಆವರಣಗಳಲ್ಲಿ ತಯಾರಿ ಮಾಡಿಕೊಳ್ಳುತ್ತಿದ್ದರು.
ದೇವಾಲಯದ ಹೊರ ಆವರಣದಲ್ಲಿ ಭಕ್ತರು ನಿಂಬೆ ಹಣ್ಣು ಆರತಿ ಮಾಡುವ ಮೂಲಕ ತಾಯಿ ಚಾಮುಂಡೇಶ್ವರಿಗೆ ತಮ್ಮ ಭಕ್ತಿ ನಮನ ಸಲ್ಲಿಸಿದರು.
ನಂಜನಗೂಡು ಪಟ್ಟಣವು ಸೇರಿದಂತೆ ವಿವಿದೆಡೆಯಿಂದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು.
ಇದೇ ಸಂದರ್ಭ ಬಂದ ಎಲ್ಲಾ ಭಕ್ತರಿಗೆ ಕರ್ನಾಟಕ ರಕ್ಷಣಾ ಪಡೆ ವೇದಿಕೆ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಪ್ರಸಾದ ವಿನಿಯೋಗ ಮಾಡಲಾಯಿತು.
ದೇವಾಲಯದ ಪ್ರಧಾನ ಅರ್ಚಕರಾದ ವೈದ್ಯನಾಥ ದೀಕ್ಷಿತ್ ಮಾತನಾಡಿ ಕಾರ್ಯಕ್ರಮದ ಬಗ್ಗೆ ವಿವರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು