5:01 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ

06/11/2024, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರೈತರ ಜೀವನಾಡಿಯಾದ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಕೆರೆಯ ಅಂಗಳದಲ್ಲಿಯೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಈ ಕೆರೆ ತುಂಬಿದರೆ ಹೆಡತಲೆ, ಹೆಮ್ಮರಗಾಲ, ಕುಂಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸೇರಿದಂತೆ ಅಂತರ್ಜಲ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ .ಸ್ವಾತಂತ್ರ್ಯ ಬಂದು 80 ವರ್ಷಗಳೇ ಕಳೆದರೂ ಇನ್ನೂ ನಾವು ನೀರಿಗಾಗಿ ಬಿಕ್ಷೆ ಬೇಡುವಂತಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ನೂರಾರು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಆದರೆ ನಮ್ಮ ರೈತರಿಗೆ ಕೇವಲ ಅಲ್ಪಸ್ವಲ್ಪ ನೀರು ಬಿಡಲು ನಮ್ಮನ್ನಾಳುವ ಸರ್ಕಾರಗಳು ಹಾಗೂ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ಭಾಗದ ರೈತರ ಅನುಕೂಲಕ್ಕಾಗಿ ಈ ಕೆರೆಗೆ ನೀರು ತುಂಬಿಸುವವರೆಗೂ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಸೋಮಣ್ಣ ಮಾತನಾಡಿ, ಈಗಾಗಲೇ ದೇವನೂರು ಏತ ನೀರಾವರಿ ಮೂಲಕ ಈ ಕೆರೆಯೂ ಸೇರಿದಂತೆ ಬೇರೆಬೇರೆ ಕೆರೆ ತುಂಬಿಸುವ ಯೋಜನೆಗಾಗಿ ಸುಮಾರು 9೦ ಕೋಟಿ ರೂಪಾಯಿ ಅನುದಾನ ನೀಡಿದ್ದು ಟೆಂಡರ್ ಸಹ ಕರೆಯಲಾಗಿದೆ ಟೆಂಡರ್ ಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರು ಕೋರ್ಟ್ ಮೊರೆ ಹೋಗಿರುವುದರಿಂದ ಕಾಮಗಾರಿ ಸ್ವಲ್ಪ ತಡವಾಗಿದೆ. ನವೆಂಬರ್ 13ರಂದು ಕೇಸ್ ಇರುವುದರಿಂದ ಅದು ಮುಗಿದ ತಕ್ಷಣ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.
ಇದಕ್ಕೂ ಮುನ್ನ ಹೆಡತಲೆ, ಹೆಮ್ಮರಗಾಲ ಹಾಗೂ ಕುಂಬರಹಳ್ಳಿ ಗ್ರಾಮದ ರೈತರು ಕಾಲ್ನಡಿಗೆ ಮೂಲಕ ಮೆರವಣಿಗೆ ಬಂದು ಕೆರೆಯ ಬಳಿ ಜಮಾವಣೆಗೊಂಡರು
ಬಂದ ಎಲ್ಲಾ ರೈತರಿಗೆ ಸ್ಥಳದಲ್ಲೇ ಅಡುಗೆ ತಯಾರು ಮಾಡಲಾಗುತ್ತಿತ್ತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರು, ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಮಹೇಶ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹಿಮ್ಮಾವು ರಘು ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಸೇರಿದಂತೆ ರೈತ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು