11:13 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ನಂಜನಗೂಡು: ಕೆರೆಗೆ ನೀರು ತುಂಬಿಸುವಂತೆ ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ

06/11/2024, 19:34

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರೈತರ ಜೀವನಾಡಿಯಾದ ನಂಜನಗೂಡು ತಾಲೂಕಿನ ಹೆಡತಲೆ ಗ್ರಾಮದ ಸರ್ವೆ ನಂಬರ್ 517ರಲ್ಲಿರುವ 19 ಎಕರೆ ಪ್ರದೇಶದ ಕೆರೆಗೆ ಕಬಿನಿ ನದಿಯಿಂದ ನೀರು ತುಂಬಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.


ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ನೇತೃತ್ವದಲ್ಲಿ ಕೆರೆಯ ಅಂಗಳದಲ್ಲಿಯೇ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ರೈತ ಸಂಘದ ಪದಾಧಿಕಾರಿಗಳು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ರೈತರು ಸಾರ್ವಜನಿಕರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಜಿಲ್ಲಾ ರೈತ ಸಂಘದ ಅಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಈ ಕೆರೆ ತುಂಬಿದರೆ ಹೆಡತಲೆ, ಹೆಮ್ಮರಗಾಲ, ಕುಂಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ರೈತರ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಸೇರಿದಂತೆ ಅಂತರ್ಜಲ ಹೆಚ್ಚಾಗಿ ಕೃಷಿ ಚಟುವಟಿಕೆಗಳಿಗೂ ಅನುಕೂಲವಾಗುತ್ತದೆ .ಸ್ವಾತಂತ್ರ್ಯ ಬಂದು 80 ವರ್ಷಗಳೇ ಕಳೆದರೂ ಇನ್ನೂ ನಾವು ನೀರಿಗಾಗಿ ಬಿಕ್ಷೆ ಬೇಡುವಂತಾಗಿದೆ. ಈ ಬಾರಿ ಉತ್ತಮ ಮಳೆಯಾಗಿದ್ದು ನೂರಾರು ಟಿಎಂಸಿ ನೀರು ತಮಿಳುನಾಡಿಗೆ ಹರಿದು ಹೋಗುತ್ತಿದೆ. ಆದರೆ ನಮ್ಮ ರೈತರಿಗೆ ಕೇವಲ ಅಲ್ಪಸ್ವಲ್ಪ ನೀರು ಬಿಡಲು ನಮ್ಮನ್ನಾಳುವ ಸರ್ಕಾರಗಳು ಹಾಗೂ ಅಧಿಕಾರಿಗಳು ಮೀನಮೇಷ ಎಣಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಈ ಭಾಗದ ರೈತರ ಅನುಕೂಲಕ್ಕಾಗಿ ಈ ಕೆರೆಗೆ ನೀರು ತುಂಬಿಸುವವರೆಗೂ ನಿರಂತರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ಸೋಮಣ್ಣ ಮಾತನಾಡಿ, ಈಗಾಗಲೇ ದೇವನೂರು ಏತ ನೀರಾವರಿ ಮೂಲಕ ಈ ಕೆರೆಯೂ ಸೇರಿದಂತೆ ಬೇರೆಬೇರೆ ಕೆರೆ ತುಂಬಿಸುವ ಯೋಜನೆಗಾಗಿ ಸುಮಾರು 9೦ ಕೋಟಿ ರೂಪಾಯಿ ಅನುದಾನ ನೀಡಿದ್ದು ಟೆಂಡರ್ ಸಹ ಕರೆಯಲಾಗಿದೆ ಟೆಂಡರ್ ಗೆ ಸಂಬಂಧಿಸಿದಂತೆ ಗುತ್ತಿಗೆದಾರರೊಬ್ಬರು ಕೋರ್ಟ್ ಮೊರೆ ಹೋಗಿರುವುದರಿಂದ ಕಾಮಗಾರಿ ಸ್ವಲ್ಪ ತಡವಾಗಿದೆ. ನವೆಂಬರ್ 13ರಂದು ಕೇಸ್ ಇರುವುದರಿಂದ ಅದು ಮುಗಿದ ತಕ್ಷಣ ಕಾಮಗಾರಿ ಪ್ರಾರಂಭಿಸುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಕೈಬಿಡಲಾಯಿತು.
ಇದಕ್ಕೂ ಮುನ್ನ ಹೆಡತಲೆ, ಹೆಮ್ಮರಗಾಲ ಹಾಗೂ ಕುಂಬರಹಳ್ಳಿ ಗ್ರಾಮದ ರೈತರು ಕಾಲ್ನಡಿಗೆ ಮೂಲಕ ಮೆರವಣಿಗೆ ಬಂದು ಕೆರೆಯ ಬಳಿ ಜಮಾವಣೆಗೊಂಡರು
ಬಂದ ಎಲ್ಲಾ ರೈತರಿಗೆ ಸ್ಥಳದಲ್ಲೇ ಅಡುಗೆ ತಯಾರು ಮಾಡಲಾಗುತ್ತಿತ್ತು.
ತಹಶೀಲ್ದಾರ್ ಶಿವಕುಮಾರ್ ಕಾಸನೂರು, ನೀರಾವರಿ ಇಲಾಖೆ ಅಧೀಕ್ಷಕ ಇಂಜಿನಿಯರ್ ಮಹೇಶ್, ಜಿಲ್ಲಾ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಹಿಮ್ಮಾವು ರಘು ತಾಲೂಕು ಘಟಕದ ಅಧ್ಯಕ್ಷ ಸತೀಶ್ ರಾವ್ ಸೇರಿದಂತೆ ರೈತ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಸುತ್ತಮುತ್ತಲ ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು