9:39 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ನಂಜನಗೂಡು: ಕೆಐಎಡಿಬಿಗೆ ಭೂಮಿ ನೀಡಿ ಉದ್ಯೋಗ ಸಿಗದ ರೈತ ಆತ್ಮಹತ್ಯೆ; ಜಿಲ್ಲಾಡಳಿತ ವೈಫಲ್ಯದಿಂದ ಕುಟುಂಬ ಅನಾಥ

20/11/2023, 16:52

ಮೋಹನ್ ನಂಜನಗೂಡು ಮೈಸೂರು

info.reeporterkarnataka@gmail.com

ಕೈಗರಿಕಾ ಪ್ರದೇಶಕ್ಕಾಗಿ ರೈತರಿಂದ ಭೂಮಿ ಪಡೆದುಕೊಂಡು ಉದ್ಯೋಗ ನೀಡದೆ ವಂಚನೆ ಮಾಡಿರುವ ಹಿನ್ನಲೆ.ಡೆಟ್ ನೋಟ್ ಬರೆದಿಟ್ಟು ರೈತ ಯುವಕ ಆತ್ಮಹತ್ಯೆ‌ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಯುವಕ ಸಿದ್ದರಾಜು(35) ಎಂಬುವವರೆ ಮೃತ ದುರ್ದೈವಿ.


ಅಡಕನಹಳ್ಳಿ ಕೈಗಾರಿಕಾ ಪ್ರದೇಶಕ್ಕೆ ಸೇರಿದ ಮೃತ ಸಿದ್ದರಾಜು ಅವರ ಪಿತ್ರಾರ್ಜಿತ ಆಸ್ತಿಯನ್ನು ಕೆಐಎಡಿಬಿ ವಶಪಡಿಸಿಕೊಂಡು ಅದನ್ನು
ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿಗೆ ಹಂಚಿಕೆ ಮಾಡಿತ್ತು.
ಆದರೆ ಕೆಐಎಡಿಬಿ ಪ್ರಕಾರ ಭೂಮಿ ಕಳೆದುಕೊಂಡ ರೈತ ಅಥವಾ ರೈತ ಮಕ್ಕಳಿಗೆ ಉದ್ಯೋಗ ನೀಡಬೇಕು ಎಂಬ ನಿಯಮವಿದ್ದರೂ ಮೃತ ರೈತನ ಕುಟುಂಬಕ್ಕೆ ಕೆಐಎಡಿಬಿ ಯಾಗಲಿ ಅಥವ ರೈತರ ಜಮೀನಿನಲ್ಲಿ ಕಾರ್ಖಾನೆ ನಡೆಸುತ್ತಿರುವ ಪಾರ್ಲೆ ಆಗ್ರೋ ಇಂಡಸ್ಟ್ರೀಸ್ ಕಂಪನಿ ಯಾಗಲಿ ಮಾನವೀಯತೆ ದೃಷ್ಟಿಯಿಂದಲಾದರು ಉದ್ಯೋಗ ನೀಡದೆ ಇರುವುದು ಘಟನೆಗೆ ಕಾರಣವೆನ್ನಲಾಗಿದೆ.
ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಉದ್ಯೋಗ ನೀಡುವಂತೆ ಒತ್ತಾಯಿಸಿ ಕಾರ್ಖಾನೆ ಮುಂದೆ ಹಸಿರು ಸೇನೆ ಹಾಗೂ ರೈತ ಸಂಘಟನೆ ಗಳು ಕಳೆದ 45 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ಗಳನ್ನು ಸಹ ಹಮ್ಮಿಕೊಂಡಿದ್ದವು. ಆದರೂ ಉದ್ಯೋಗ ನೀಡದ ಕೆಐಎಡಿಬಿ ಹಾಗೂ ಕಾರ್ಖಾನೆಯಿಂದ ಮನನೊಂದ ರೈತ ಸಿದ್ದರಾಜು ಡೆಟ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ‌.
ಮೃತನ ಪತ್ನಿ ರಕ್ಷಿತಾ ನೀಡಿರುವ ದೂರಿನ ಮೇರೆಗೆ ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರಿಗೆ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಘಟನೆಯ ಬಗ್ಗೆ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮಾತನಾಡಿ, ಕೆಐಎಡಿಬಿ ಹಾಗೂ ಕಾರ್ಖಾನೆ ಯವರ ರೈತ ವಿರೋಧಿ ನೀತಿಯನ್ನು ಖಂಡಿಸಿ ಮೃತನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು